ಬ್ರೇಕಿಂಗ್ ನ್ಯೂಸ್
20-04-26 05:28 pm HK News Staffer ಕರಾವಳಿ
ಪುತ್ತೂರು, ಎಪ್ರಿಲ್ 20: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗಡಿ ಏಲಂ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಗಂಭೀರ ಆರೋಪ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್ ದಾಸ್, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ವ್ಯಾಪಾರಕ್ಕೆ ಕೇವಲ 320 ಅಂಗಡಿಗಳಿಗೆ ಮಾತ್ರ ಅಧಿಕೃತವಾಗಿ ಏಲಂ ಮೂಲಕ ಅವಕಾಶ ನೀಡಲಾಗಿತ್ತು. ಆದರೆ, ಪ್ರಸ್ತುತ 700ಕ್ಕೂ ಅಧಿಕ ಅಂಗಡಿಗಳು ಕಾರ್ಯಾಚರಿಸುತ್ತಿವೆ ಎಂದು ಅವರು ದೂರಿದರು.
“ಅಧಿಕೃತವಾಗಿ ನಿಗದಿಪಡಿಸಿದ 320 ಅಂಗಡಿಗಳಿಗಿಂತ ಹೆಚ್ಚುವರಿಯಾಗಿ ಇರುವ 400ಕ್ಕೂ ಹೆಚ್ಚು ಅಂಗಡಿಗಳಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗಿದೆ. ಈ ಹಣವು ದೇವಸ್ಥಾನದ ಬೊಕ್ಕಸಕ್ಕೆ ಸೇರುವ ಬದಲು ಭ್ರಷ್ಟರ ಪಾಲಾಗಿದೆ. ಇದರಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಕಾರ್ಯ ನಿರ್ವಹಣಾಧಿಕಾರಿ ಹಾಗೂ ಅಧಿಕಾರಿ ವರ್ಗದವರು ಭಾಗಿಯಾಗಿದ್ದಾರೆ,” ಎಂದು ಮಹೇಶ್ ದಾಸ್ ಆರೋಪಿಸಿದರು.
ಹಣ ವಸೂಲಿಗೆ ಸಂಬಂಧಿಸಿದಂತೆ ದೇವಸ್ಥಾನದ ಅಧಿಕೃತ ಲೆಟರ್ ಹೆಡ್ ಬದಲಾಗಿ, ಸಾಮಾನ್ಯ ಬಿಳಿ ಕಾಗದದ ಚೂರುಗಳಲ್ಲಿ ದೇವಸ್ಥಾನದ ಸೀಲ್ ಹಾಕಿ ಹಣ ಪಡೆದುಕೊಳ್ಳಲಾಗುತ್ತಿದೆ. ಈ ಮೂಲಕ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಹಗರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು. ಕಷ್ಟಪಟ್ಟು ವ್ಯಾಪಾರ ಮಾಡುವ ಹಿಂದೂ ವ್ಯಾಪಾರಿಗಳಿಗೆ ನ್ಯಾಯ ಸಿಗಬೇಕು ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm