ಬ್ರೇಕಿಂಗ್ ನ್ಯೂಸ್
04-01-21 09:05 pm Mangaluru Correspondant ಕರಾವಳಿ
Photo credits : RPTS
ಮಂಗಳೂರು, ಜ.4: ಪಡೀಲ್ ಬಳಿಯ ಫೈಸಲ್ ನಗರದಲ್ಲಿ ಏಕ್ಟಿವಾ ವಾಹನದಲ್ಲಿ ಸಾಗುತ್ತಿದ್ದ ಸವಾರರಿಬ್ಬರು ರಸ್ತೆ ಬದಿಯ ಬಾವಿಗೆ ಬಿದ್ದು ದುರಂತ ಸಂಭವಿಸಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಫೈಸಲ್ ನಗರದ ಏರು ಹಾದಿಯ ರಸ್ತೆಯಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಯಿದ್ದ ಬಾವಿಗೆ ಉರುಳಿ ಬಿದ್ದಿದೆ. ಕಾಂಕ್ರೀಟ್ ರಸ್ತೆಯಾಗಿದ್ದು ರಸ್ತೆ ಬದಿಗೆ ಇಳಿಯುವಷ್ಟರಲ್ಲಿ ಸ್ಕಿಡ್ ಆಗಿ ಏಕ್ಟಿವಾ ಉರುಳಿ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಏಕ್ಟಿವಾ ವಾಹನ ರಸ್ತೆ ಬದಿಯಲ್ಲಿ ಉಳಿದುಕೊಂಡಿದ್ದರೆ, ಅದರಲ್ಲಿದ್ದ ಇಬ್ಬರು ಸವಾರರು ಬಾವಿಗೆ ಉರುಳಿ ಬಿದ್ದಿದ್ದಾರೆ.
ಘಟನೆ ನಡೆದಿರುವ ಪ್ರದೇಶದಲ್ಲಿ ಕತ್ತಲು ಕವಿದಿದ್ದರಿಂದ ಯಾರಿಗೂ ಗೊತ್ತಾಗಿಲ್ಲ. ಬೀದಿ ದೀಪ ಇಲ್ಲದ ರಸ್ತೆ ಅದಾಗಿದ್ದು ಇತ್ತೀಚೆಗಷ್ಟೇ ಕಾಂಕ್ರೀಟ್ ಆಗಿತ್ತು. ರಸ್ತೆ ಬದಿಯಲ್ಲೇ ಬಾವಿ ಇದ್ದು ಅದಕ್ಕೆ ಆವರಣ ಗೋಡೆ ಇರಲಿಲ್ಲ. ರಸ್ತೆ ಬದಿ ಅಪಾಯಕಾರಿ ಜಾಗ ಆಗಿದ್ದರೂ ತಡೆಗೋಡೆ ಮಾಡಿರಲಿಲ್ಲ.
ಸ್ವಲ್ಪ ಹೊತ್ತಿನ ಬಳಿಕ ಅದೇ ದಾರಿಯಲ್ಲಿ ಬಂದವರು ಯಾರೋ ಏಕ್ಟಿವಾ ಗಮನಿಸಿ, ಬಾವಿಗೆ ಇಣುಕಿದಾಗ ನೀರಿನಲ್ಲಿ ಯುವಕರು ಇರುವುದು ಪತ್ತೆಯಾಗಿದೆ. ಆನಂತರ ಸ್ಥಳೀಯರು ಸೇರಿ ಒಬ್ಬನನ್ನು ರಕ್ಷಣೆ ಮಾಡಿದ್ದು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದಿದ್ದಾರೆ. ಇನ್ನೊಬ್ಬನ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಂಟು ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಆಗಮಿಸಿದೆ. ಅದಕ್ಕೂ ಮುನ್ನ ಲೈಟ್ ಇಲ್ಲದೆ ಸ್ಥಳೀಯರು ಮೊಬೈಲ್ ಬೆಳಕಿನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ನೀರಿಗೆ ಬಿದ್ದವರ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಮತ್ತು ನೂರಾರು ಮಂದಿ ಸೇರಿದ್ದಾರೆ.
Breaking Update: ಆ್ಯಕ್ಟಿವಾ ನಿಯಂತ್ರಣ ತಪ್ಪಿ ಪಲ್ಟಿ ; ಸವಾರ ಬಾವಿಗೆ ಬಿದ್ದು ಸಾವು !
Two Wheeler Active fell into well after rider lost control and got slipped in FaizalNagar, Padil, Mangalore. The Fire brigade personals rushed to the spot and have rescued two persons.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm