ಬ್ರೇಕಿಂಗ್ ನ್ಯೂಸ್
25-04-26 01:45 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 25: ದೈವಸ್ಥಾನದ ಭಂಡಾರ ಮೆರವಣಿಗೆ ಒಯ್ಯುತ್ತಿದ್ದಾಗ ಕಲ್ಲಿನ ಸೇತುವೆಯೊಂದು ಮುರಿದು ಬಿದ್ದು ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯಗೊಂಡ ಘಟನೆ ಮೂಡುಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ಪಡ್ಯಾರಬೆಟ್ಟು ಕಾರಣಿಕದ ಕೊಡಮಣಿತ್ತಾಯ ಕ್ಷೇತ್ರದ ಮುಕ್ಕಾಲ್ದಿ ಸುನಿಲ್ ಶೆಟ್ಟಿ, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ಸೊಂಟ, ಕೈಕಾಲುಗಳಿಗೆ ತೀವ್ರ ಗಾಯಗೊಂಡಿದ್ದಾರೆ. ತಾಕೋಡೆಯಲ್ಲಿ ಕುಟುಂಬವೊಂದರ ಕೊಡಮಣಿತ್ತಾಯ ಮತ್ತು ಇನ್ನಿತರ ದೈವಗಳಿಗೆ ಧರ್ಮ ನೇಮಕ್ಕೆ ತಯಾರಿ ನಡೆದಿತ್ತು. ಹೀಗಾಗಿ ಪಡ್ಯಾರಬೆಟ್ಟು ದೇವಸ್ಥಾನದ ಪ್ರತಿನಿಧಿ ಸುನಿಲ್ ಶೆಟ್ಟಿ ನೇತೃತ್ವದಲ್ಲಿ ಪುಚ್ಚೆಮೊಗರಿನ ಭಂಡಾರ ಮನೆಯಿಂದ ದೈವದ ಆಭರಣಗಳನ್ನು ತರುತ್ತಿದ್ದರು.
ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಬರುತ್ತಿದ್ದಾಗ ಬಾವದಬೈಲಿನ ಹಳೆ ಕಾಲದ ಕಲ್ಲಿನ ಸೇತುವೆ ಏಕಾಏಕಿ ಮುರಿದು ಬಿದ್ದಿದೆ. ಪಲ್ಲಕ್ಕಿಯಲ್ಲಿದ್ದ ಆಭರಣ ಸಮೇತ ಉರುಳಿ ಬಿದ್ದಿದ್ದು ಪರಿಣಾಮ ಅದನ್ನು ಹೊತ್ತುಕೊಂಡಿದ್ದವರು ಹತ್ತಡಿ ಆಳದ ತೋಡಿಗೆ ಬಿದ್ದು ಗಾಯಗೊಂಡಿದ್ದಾರೆ.



ಕೊಂಬು ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ನಡೆಯುತ್ತಿತ್ತು. ಎದುರಿನಲ್ಲಿ ವಿಡಿಯೋ ಮಾಡುತ್ತಿದ್ದವರು, ಬ್ಯಾಂಡ್ ವಾದ್ಯಗಳ ಸೆಟ್ ನವರು ಇದ್ದರು. ಅದರ ಹಿಂದೆ, ದೀಟಿಗೆ ಹಿಡಿದುಕೊಂಡವರು ಇದ್ದರು. ದೀಟಿಗೆ ಹಿಡಿದವರು ಸೇತುವೆ ಪಾಸ್ ಆಗಿದ್ದು ತಿರುಗಿ ನೋಡುತ್ತಿದ್ದಂತೆ ಹಿಂದೆ ಪಲ್ಲಕ್ಕಿಯಲ್ಲಿ ಹೊತ್ತು ಬರುತ್ತಿದ್ದವರು ಸೇತುವೆ ಸಮೇತ ಕುಸಿದು ಬಿದ್ದಿದ್ದಾರೆ. ಕುಸಿದು ಬೀಳುವ ದೃಶ್ಯ ಮುಂದಿದ್ದ ಕ್ಯಾಮರಾದಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.
ಸೇತುವೆ ಮುರಿದು ಬಿದ್ದಿರುವುದನ್ನು ನೋಡಿದರೆ ಅದಕ್ಕೆ ಬೀಮ್ ಹಾಕಿರುವಂತೆ ಕಾಣುತ್ತಿಲ್ಲ. ಅಡಿ ಭಾಗಕ್ಕೆ ಕಾಂಕ್ರೀಟ್ ಬೀಮ್ ಹಾಕದೆ ಕಲ್ಲಿನಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿರುವಂತೆ ತೋರುತ್ತಿದೆ. ಪಲ್ಲಕ್ಕಿ ಹೊತ್ತವರು ಮತ್ತು ಇತರರು ಒಮ್ಮೆಗೇ ನಡಧುಹೋಗಿದ್ದರಿಂದ ಅದರ ಭಾರಕ್ಕೆ ಕುಸಿದು ಬಿದ್ದಿದೆ. ಬೇಸಗೆ ಆಗಿದ್ದರಿಂದ ತೋಡಿನಲ್ಲಿ ನೀರಿಲ್ಲದೆ ಅಡಿಭಾಗದಲ್ಲಿದ್ದ ಕಲ್ಲು ತಾಗಿ ಜೋರು ಪೆಟ್ಟು ಬಿದ್ದಿದೆ. ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಪರಿಕರಗಳಿಗೆ ಹಾನಿಯಾಗಿದೆ. ದುರ್ಘಟನೆ ಹಿನ್ನೆಲೆಯಲ್ಲಿ ತಾಕೋಡೆಯ ಧರ್ಮನೇಮ ಸ್ಥಗಿತಗೊಂಡಿದೆ.
#Bridge collapses during a temple procession in #Moodbidri, #Mangaluru—8 men carrying the palanquin fall nearly 10 feet, sustaining serious injuries. Incident caught on camera; ritual halted.#Mangaluru #BridgeCollapse #Karnataka #BreakingNews pic.twitter.com/DayOjoVed4
— Headline Karnataka (@hknewsonline) April 25, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am