ಬ್ರೇಕಿಂಗ್ ನ್ಯೂಸ್
28-04-26 01:26 pm HK News Staffer ಕರಾವಳಿ
ಬಂಟ್ವಾಳ, ಎಪ್ರಿಲ್ 28: ನೂತನ ಮನೆಯ ಗೃಹ ಪ್ರವೇಶದ ಔಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿದ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ ನಡೆದಿದೆ.
ಸಜಿಪನಡು ನಿವಾಸಿ ಪುತ್ತನಾಕ ಎಂಬವರ ಪುತ್ರ ಅಮೀರ್ ಅರ್ಶದಿ(36) ಹಠಾತ್ ಹೃದಯಾಘಾತಕ್ಕೀಡಾಗಿ ಮೃತಪಟ್ಟವರು. ಅವರಿಗೆ ತಂದೆ-ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮರ್ಹೂಂ ಶೈಖುನಾ ಮಿತ್ತಬೈಲು ಉಸ್ತಾದರ ಶಿಷ್ಯರಾಗಿದ್ದ ಇವರು ಕಾಸರಗೋಡು ತಾಳಿಪಡ್ಪು ಮಸ್ಟಿದುಲ್ ಹುದಾ ಮಸೀದಿಯಲ್ಲಿ ಐದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದು, ಯುವ ಸಮೂಹದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ನಡೆಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೆ ಕಿಡ್ನಿ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಿ.ಸಿ.ರೋಡ್ ಪರ್ಲಿಯಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಜಿಪಮುನ್ನೂರು ಗ್ರಾಮದ ಆಲಂಪಾಡಿ-ಕೊಪ್ಪಳ ಎಂಬಲ್ಲಿ ನೂತನ ಮನೆ ನಿರ್ಮಿಸಿದ್ದು, ಏ.17ರಂದು ಔಪಚಾರಿಕ ಗೃಹ ಪ್ರವೇಶ ಪ್ರಕ್ರಿಯೆ ನಡೆಸಿದ್ದರು. ಏ.27 ರಂದು ಮಧ್ಯಾಹ್ನ ಬಂಧು-ಮಿತ್ರರಿಗೆ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕಾಗಿ ಭಾನುವಾರ ರಾತ್ರಿ ವರೆಗೂ ಬಂಧು-ಮಿತ್ರರಿಗೆ ಕರೆ ಮಾಡಿ ಆಹ್ವಾನಿಸಿದ್ದರು ಎಂದು ಆಹ್ವಾನ ಕರೆ ಸ್ವೀಕರಿಸಿದ ಬಂಧು-ಮಿತ್ರರು ತಿಳಿಸಿದ್ದಾರೆ. ಅಮೀರ್ ಅರ್ಶದಿ ಅವರ ಹಠಾತ್, ಅಕಾಲಿಕ ನಿಧನಕ್ಕೆ ಬಂಧು ಮಿತ್ರರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
In a tragic turn of events, a young Muslim scholar from Bantwal passed away suddenly on the very day of his new housewarming feast. The deceased, known in the community for his knowledge and humility, had organized the gathering to celebrate moving into his new home.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am