ಬ್ರೇಕಿಂಗ್ ನ್ಯೂಸ್
02-05-26 11:05 pm Mangalore Correspondent ಕರಾವಳಿ
ಮಂಗಳೂರು, ಮೇ 2: ಉಳ್ಳಾಲದ ಹಝ್ರತ್ ಸಯ್ಯದ್ ಮದನಿ ದರ್ಗಾ ಹಾಗೂ ಜುಮ್ಮಾ ಮಸೀದಿಗೆ ನೂತನ ಆಡಳಿತ ಸಮಿತಿ ಆಯ್ಕೆಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ. ಈ ಸಂಬಂಧ ಮಂಡಳಿ ಆದೇಶ ಹೊರಡಿಸಿದ್ದು, ಚುನಾವಣೆ ಮತ್ತು ನೋಂದಣಿ ಪ್ರಕ್ರಿಯೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿದೆ.
ಉಳ್ಳಾಲ ದರ್ಗಾ ಮತ್ತು ಮಸೀದಿ ಆಡಳಿತ ನಿರ್ವಹಿಸುತ್ತಿದ್ದ ಹಾಲಿ ವ್ಯವಸ್ಥಾಪಕ ಸಮಿತಿಯ ಮೂರು ವರ್ಷಗಳ ಅವಧಿ 2026ರ ಮಾರ್ಚ್ 7ರಂದು ಪೂರ್ಣಗೊಂಡಿದೆ. ಅವಧಿ ಮುಗಿದ ತಕ್ಷಣವೇ ನೂತನ ಸಮಿತಿ ರಚಿಸುವ ನಿಟ್ಟಿನಲ್ಲಿ ವಕ್ಫ್ ಮಂಡಳಿ ಚುನಾವಣೆ ನಡೆಸಲು ಮುಂದಾಗಿದೆ.
ಚುನಾವಣಾಧಿಕಾರಿಯಾಗಿ ನಿವೃತ್ತ ವಕ್ಫ್ ಅಧಿಕಾರಿ ಹಾಗೂ ಪ್ರಸ್ತುತ ಸಮಾಲೋಚಕರಾಗಿರುವ ಮೊಹಮ್ಮದ್ ಪಾಷಾ ಅವರನ್ನು ಚುನಾವಣಾ ಪ್ರಕ್ರಿಯೆ ಜವಾಬ್ದಾರಿಗೆ ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಹಾಲಿ ವಕ್ಫ್ ಅಧಿಕಾರಿಗಳನ್ನು ಮತದಾರರ ಪಟ್ಟಿ ಸಿದ್ಧಪಡಿಸುವ ಮತ್ತು ನೋಂದಣಿ ಕಾರ್ಯಕ್ಕೆ ನೇಮಕ ಮಾಡಲಾಗಿದೆ.
ಅರ್ಹ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತದೆ. ನಂತರ ಚುನಾವಣಾ ದಿನಾಂಕ ಘೋಷಿಸಿ, ನೂತನ ಆಡಳಿತ ಮಂಡಳಿಯ ಆಯ್ಕೆ ನಡೆಯಲಿದೆ.
ಉಳ್ಳಾಲ ಜುಮ್ಮಾ ಮಸೀದಿ ಹಾಗೂ ದರ್ಗಾ ಆಡಳಿತದ ಹಾಲಿ ಸಮಿತಿ ವಿರುದ್ಧ ಸಮಿತಿ ಸದಸ್ಯರೇ ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿ ಕಳೆದೊಂದು ವರ್ಷದಿಂದ ಕಾನೂನು ಹೋರಾಟ ಮಾಡುತ್ತಿದ್ದು ಪರಿಶೀಲನೆಗೆ ರಾಜ್ಯ ವಕ್ಫ್ ಮಂಡಳಿಗೆ ಹೈಕೋರ್ಟ್ ಆದೇಶ ಮಾಡಿತ್ತು. ಆಕ್ಷೇಪಣೆಗಳ ಪರಿಶೀಲನೆಗಾಗಿ ತನಿಖಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ವಕ್ಫ್ ಮಂಡಳಿ ಆದೇಶ ಮಾಡಿತ್ತು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am