ಬ್ರೇಕಿಂಗ್ ನ್ಯೂಸ್
07-05-26 07:40 pm HK News Staffer ಕರಾವಳಿ
ಕಾರವಾರ, ಮೇ 07: ರಾಜ್ಯದ ಹಲವು ಭಾಗಗಳಲ್ಲಿ ಅನುದಾನದ ಕೊರತೆ ಹಾಗೂ ಬಿಟುಮಿನ್ ಅಭಾವದಿಂದ ರಸ್ತೆ ಕಾಮಗಾರಿಗಳು ಅರ್ಧದಲ್ಲೇ ನಿಂತಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತ್ರ ಸುಸ್ಥಿತಿಯಲ್ಲಿದ್ದ ಕಾಂಕ್ರೀಟ್ ರಸ್ತೆಯ ಮೇಲೆಯೇ ಡಾಂಬರು ಹಾಕಲು ಮುಂದಾದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಾರ್ವಜನಿಕ ಹಣದ ದುರ್ಬಳಕೆ ಆರೋಪದ ನಡುವೆ, ಸ್ಥಳೀಯರ ತೀವ್ರ ವಿರೋಧದಿಂದ ಕಾಮಗಾರಿಯನ್ನು ಮಧ್ಯದಲ್ಲೇ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾರವಾರ ಬಸ್ ನಿಲ್ದಾಣದಿಂದ ಕೈಗಾ ಅಣುಸ್ಥಾವರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಕಾಂಕ್ರೀಟ್ ರಸ್ತೆಯ ಮೇಲೆ ಏಕಾಏಕಿ ಡಾಂಬರೀಕರಣ ಆರಂಭಿಸಲಾಗಿತ್ತು. ರಸ್ತೆ ಈಗಾಗಲೇ ಉತ್ತಮ ಸ್ಥಿತಿಯಲ್ಲಿದ್ದರೂ ಯಾವುದೇ ಅಗತ್ಯವಿಲ್ಲದೇ ಡಾಂಬರು ಹಾಕುತ್ತಿರುವುದನ್ನು ಕಂಡ ಸಾರ್ವಜನಿಕರು ಗುತ್ತಿಗೆದಾರರನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಕಾಮಗಾರಿ ನಡೆಸುತ್ತಿದ್ದವರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಇದಾದ ಬಳಿಕ ಇಂದು ಹಾಕಲಾಗಿದ್ದ ಡಾಂಬರನ್ನು ಜೆಸಿಬಿ ಮೂಲಕ ಕಿತ್ತುಹಾಕುವ ಕಾರ್ಯ ನಡೆದಿದ್ದು, ಈ ಪ್ರಕ್ರಿಯೆಯಲ್ಲಿ ಈಗಾಗಲೇ ಸುಸ್ಥಿತಿಯಲ್ಲಿದ್ದ ಕಾಂಕ್ರೀಟ್ ರಸ್ತೆಯ ಮೇಲ್ಭಾಗವೂ ಹಾನಿಗೊಳಗಾಗಿದೆ. ಇದರಿಂದ ಸಾರ್ವಜನಿಕರು ಮತ್ತಷ್ಟು ಕಿಡಿಕಾರಿದ್ದು, “ಚೆನ್ನಾಗಿದ್ದ ರಸ್ತೆಯನ್ನೇ ಹಾಳು ಮಾಡಿ ಸರ್ಕಾರದ ಹಣವನ್ನು ಪೋಲು ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.
ಮೂಲಗಳ ಪ್ರಕಾರ, ಕೆಶಿಪ್ ಯೋಜನೆಯಡಿ ಈ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿತ್ತು. ಆದರೆ ಕಾಮಗಾರಿ ಕೈಗೊಂಡ ಗುತ್ತಿಗೆದಾರ ವಿಜಯಪುರ ಮೂಲದವರಾಗಿದ್ದು, ಸ್ಥಳೀಯ ಪರಿಸ್ಥಿತಿಯ ಬಗ್ಗೆ ಸಮರ್ಪಕ ಮಾಹಿತಿ ಪಡೆಯದೇ ಕೆಲಸ ಆರಂಭಿಸಿದ್ದಾರೆ ಎನ್ನಲಾಗಿದೆ. ಇನ್ನೂ ಗಂಭೀರ ಸಂಗತಿ ಎಂದರೆ, ಈ ಕಾಮಗಾರಿಯ ಬಗ್ಗೆ ಸ್ಥಳೀಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೂ ಪೂರ್ಣ ಮಾಹಿತಿ ಇರಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರೇ ಅಸಮಾಧಾನ ಹೊರಹಾಕುತ್ತಿರುವ ಸಂದರ್ಭದಲ್ಲೇ, ಈಗಾಗಲೇ ಉತ್ತಮ ಸ್ಥಿತಿಯಲ್ಲಿರುವ ರಸ್ತೆಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಡಾಂಬರು ಹಾಕಲು ಮುಂದಾಗಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.
ಇನ್ನು, ಲಾಭದ ಉದ್ದೇಶದಿಂದ ಅವೈಜ್ಞಾನಿಕ ಕಾಮಗಾರಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಡಾಂಬರು ಹಾಕಿ ನಂತರ ಅದನ್ನೇ ಕಿತ್ತುಹಾಕುವ ನೆಪದಲ್ಲಿ ಕಾಂಕ್ರೀಟ್ ರಸ್ತೆಯನ್ನು ಹಾಳು ಮಾಡಿರುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಸ್ಥಳೀಯರನ್ನು ಕಾಡುತ್ತಿದೆ.
ಒಟ್ಟಾರೆಯಾಗಿ, ರಾಜ್ಯದಲ್ಲಿ ಬಿಟುಮಿನ್ ಕೊರತೆಯಿಂದ ಅನೇಕ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿರುವಾಗ, ಕಾರವಾರದಲ್ಲಿ ಮಾತ್ರ ಉತ್ತಮ ರಸ್ತೆಯನ್ನೇ ಹಾಳು ಮಾಡುವ ರೀತಿಯ ಕಾಮಗಾರಿ ನಡೆದಿರುವುದು ಆಡಳಿತ ವ್ಯವಸ್ಥೆ ಹಾಗೂ ಕಾಮಗಾರಿ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am