ಬ್ರೇಕಿಂಗ್ ನ್ಯೂಸ್
08-05-26 09:05 pm HK News Staffer ಕರಾವಳಿ
ಮಂಗಳೂರು, ಮೇ 08: ದಶಕಗಳ ಕನಸಾಗಿದ್ದ ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆ ನಿರ್ಮಾಣದಿಂದ ತಣ್ಣೀರುಬಾವಿ ಭಾಗದ ಜನರ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ.
ದಶಕಗಳ ಬೇಡಿಕೆಗೆ ಸಾಕಾರ;
ತಣ್ಣೀರುಬಾವಿ ಬೀಚ್ ಮಂಗಳೂರು ನಗರದ ಸಮೀಪದಲ್ಲೇ ಇದ್ದರೂ, ರಸ್ತೆ ಮಾರ್ಗದಲ್ಲಿ ತೆರಳಬೇಕಾದರೆ ಸುಮಾರು 15 ರಿಂದ 20 ಕಿಲೋಮೀಟರ್ ಸುತ್ತುವ ಪರಿಸ್ಥಿತಿ ಇತ್ತು. ಫೆರಿಯಲ್ಲಿ ಕೆಲವೇ ನಿಮಿಷಗಳಲ್ಲಿ ತಲುಪಬಹುದಾದ ಈ ಭಾಗಕ್ಕೆ ನೇರ ರಸ್ತೆ ಸಂಪರ್ಕದ ಕೊರತೆ ವರ್ಷಗಳಿಂದ ಜನರ ಸಮಸ್ಯೆಯಾಗಿತ್ತು.
ತಣ್ಣೀರುಬಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮಂಗಳೂರಿಗೆ ಸಂಪರ್ಕ ಸಾಧಿಸಲು ಫೆರಿಯನ್ನೇ ಅವಲಂಬಿಸಬೇಕಾಗುತ್ತಿತ್ತು. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಪ್ರಯಾಣದ ಸಮಯ 35 ನಿಮಿಷದಿಂದ 10 ನಿಮಿಷಕ್ಕೆ;
ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ಒಟ್ಟು 285 ಮೀಟರ್ ಉದ್ದವಿದ್ದು, ಸುಮಾರು 64 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದರಲ್ಲೂ 100 ಮೀಟರ್ ಉದ್ದದ ಬೋ-ಸ್ಟ್ರಿಂಗ್ ವಿನ್ಯಾಸದ ಸೇತುವೆ ಪ್ರಮುಖ ಆಕರ್ಷಣೆಯಾಗಿದೆ. ಸೇತುವೆ ಪೂರ್ಣಗೊಂಡ ಬಳಿಕ ಪ್ರಸ್ತುತ 30 ರಿಂದ 35 ನಿಮಿಷ ಬೇಕಾಗುವ ಪ್ರಯಾಣ ಕೇವಲ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ.
ಎಲ್ಲಾ ವಾಹನಗಳಿಗೆ ಸಂಚಾರ ಸೌಲಭ್ಯ ;
ಈ ಸೇತುವೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಸಂಚಾರಕ್ಕೆ ಇದು ಹೊಸ ಚೈತನ್ಯ ನೀಡಲಿದೆ ಎನ್ನಲಾಗುತ್ತಿದೆ.
ಮಳೆಗಾಲದ ನಡುವೆ ಕಾಮಗಾರಿ ಸವಾಲು;
ಸದ್ಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದರೂ, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಉಳಿದ ಕೆಲಸಗಳು ಎಷ್ಟು ವೇಗವಾಗಿ ಪೂರ್ಣಗೊಳ್ಳುತ್ತವೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಲೋಕಾರ್ಪಣೆ ವೇಳಾಪಟ್ಟಿ ಘೋಷಿಸಿರುವುದರಿಂದ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm