ಬ್ರೇಕಿಂಗ್ ನ್ಯೂಸ್
08-05-26 09:05 pm HK News Staffer ಕರಾವಳಿ
ಮಂಗಳೂರು, ಮೇ 08: ದಶಕಗಳ ಕನಸಾಗಿದ್ದ ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆ ನಿರ್ಮಾಣದಿಂದ ತಣ್ಣೀರುಬಾವಿ ಭಾಗದ ಜನರ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ.
ದಶಕಗಳ ಬೇಡಿಕೆಗೆ ಸಾಕಾರ;
ತಣ್ಣೀರುಬಾವಿ ಬೀಚ್ ಮಂಗಳೂರು ನಗರದ ಸಮೀಪದಲ್ಲೇ ಇದ್ದರೂ, ರಸ್ತೆ ಮಾರ್ಗದಲ್ಲಿ ತೆರಳಬೇಕಾದರೆ ಸುಮಾರು 15 ರಿಂದ 20 ಕಿಲೋಮೀಟರ್ ಸುತ್ತುವ ಪರಿಸ್ಥಿತಿ ಇತ್ತು. ಫೆರಿಯಲ್ಲಿ ಕೆಲವೇ ನಿಮಿಷಗಳಲ್ಲಿ ತಲುಪಬಹುದಾದ ಈ ಭಾಗಕ್ಕೆ ನೇರ ರಸ್ತೆ ಸಂಪರ್ಕದ ಕೊರತೆ ವರ್ಷಗಳಿಂದ ಜನರ ಸಮಸ್ಯೆಯಾಗಿತ್ತು.
ತಣ್ಣೀರುಬಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮಂಗಳೂರಿಗೆ ಸಂಪರ್ಕ ಸಾಧಿಸಲು ಫೆರಿಯನ್ನೇ ಅವಲಂಬಿಸಬೇಕಾಗುತ್ತಿತ್ತು. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಪ್ರಯಾಣದ ಸಮಯ 35 ನಿಮಿಷದಿಂದ 10 ನಿಮಿಷಕ್ಕೆ;
ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ಒಟ್ಟು 285 ಮೀಟರ್ ಉದ್ದವಿದ್ದು, ಸುಮಾರು 64 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದರಲ್ಲೂ 100 ಮೀಟರ್ ಉದ್ದದ ಬೋ-ಸ್ಟ್ರಿಂಗ್ ವಿನ್ಯಾಸದ ಸೇತುವೆ ಪ್ರಮುಖ ಆಕರ್ಷಣೆಯಾಗಿದೆ. ಸೇತುವೆ ಪೂರ್ಣಗೊಂಡ ಬಳಿಕ ಪ್ರಸ್ತುತ 30 ರಿಂದ 35 ನಿಮಿಷ ಬೇಕಾಗುವ ಪ್ರಯಾಣ ಕೇವಲ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ.
ಎಲ್ಲಾ ವಾಹನಗಳಿಗೆ ಸಂಚಾರ ಸೌಲಭ್ಯ ;
ಈ ಸೇತುವೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಸಂಚಾರಕ್ಕೆ ಇದು ಹೊಸ ಚೈತನ್ಯ ನೀಡಲಿದೆ ಎನ್ನಲಾಗುತ್ತಿದೆ.
ಮಳೆಗಾಲದ ನಡುವೆ ಕಾಮಗಾರಿ ಸವಾಲು;
ಸದ್ಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದರೂ, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಉಳಿದ ಕೆಲಸಗಳು ಎಷ್ಟು ವೇಗವಾಗಿ ಪೂರ್ಣಗೊಳ್ಳುತ್ತವೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಲೋಕಾರ್ಪಣೆ ವೇಳಾಪಟ್ಟಿ ಘೋಷಿಸಿರುವುದರಿಂದ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm