ಬ್ರೇಕಿಂಗ್ ನ್ಯೂಸ್
09-05-26 02:13 pm HK News Staffer ಕರಾವಳಿ
ಉಡುಪಿ, ಮೇ 9: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉಡುಪಿ ಪೊಲೀಸರು “ಲಾಕ್ ಹೌಸ್ ಬೀಟ್ ಸಿಸ್ಟಮ್” ಎಂಬ ಹೊಸ ಭದ್ರತಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮನೆಮಾಲೀಕರು ಪ್ರವಾಸ, ಉದ್ಯೋಗ ಅಥವಾ ಇತರ ಕಾರಣಗಳಿಂದ ಕೆಲವು ದಿನ ಮನೆ ಖಾಲಿ ಇಡುವ ಸಂದರ್ಭಗಳಲ್ಲಿ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ.
ಖಾಲಿ ಮನೆಗಳ ಮೇಲೆ ಪೊಲೀಸರ ವಿಶೇಷ ನಿಗಾ
ಈ ಯೋಜನೆಯಡಿ ಮನೆಮಾಲೀಕರು ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ, ಹೊರಡುವ ಹಾಗೂ ಮರಳುವ ದಿನಾಂಕದ ಮಾಹಿತಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಮಾಹಿತಿ ಪಡೆದ ಬಳಿಕ ಪೊಲೀಸ್ ಸಿಬ್ಬಂದಿ ಆ ಮನೆಗಳ ಮೇಲೆ ವಿಶೇಷ ನಿಗಾ ವಹಿಸಿ, ವಿಶೇಷವಾಗಿ ರಾತ್ರಿ ವೇಳೆ ನಿಯಮಿತ ಪೆಟ್ರೋಲಿಂಗ್ ನಡೆಸಲಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, “ಜನರ ಮನೆಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಮನೆ ಕಳ್ಳತನ ಪ್ರಕರಣಗಳನ್ನು ಬಹಳ ಮಟ್ಟಿಗೆ ತಡೆಯಬಹುದು” ಎಂದು ತಿಳಿಸಿದ್ದಾರೆ.
ಮೂರು ವರ್ಷಗಳಲ್ಲಿ ಕಳ್ಳತನ ಪ್ರಕರಣ ಏರಿಕೆ
ಪೊಲೀಸರ ಮಾಹಿತಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಈ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಖಾಲಿ ಮನೆಗಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳತನ ತಡೆಯಲು ಈ ಯೋಜನೆ ಸಹಕಾರಿ ಆಗಲಿದೆ ಎಂಬ ವಿಶ್ವಾಸವನ್ನು ಇಲಾಖೆ ವ್ಯಕ್ತಪಡಿಸಿದೆ.
ಸೇವೆ ಪಡೆಯಲು ಏನು ಮಾಡಬೇಕು?
• ಮನೆ ಕೆಲವು ದಿನ ಖಾಲಿ ಇಡುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
• ಮನೆಯ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಪರ್ಯಾಯ ಸಂಪರ್ಕ ಸಂಖ್ಯೆಯನ್ನು ಸಲ್ಲಿಸಬೇಕು.
• ಹೊರಡುವ ದಿನಾಂಕ ಮತ್ತು ಮರಳುವ ದಿನಾಂಕವನ್ನು ತಿಳಿಸಬೇಕು.
• ಅಗತ್ಯವಿದ್ದರೆ ಆಧಾರ್ ಮಾಹಿತಿ ಹಾಗೂ ಇಮೇಲ್ ವಿಳಾಸ ನೀಡಬೇಕು.
• ಪೊಲೀಸ್ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿ ನೀಡಿದ ಬಳಿಕ ಪೊಲೀಸರು ಮನೆ ಸುತ್ತಮುತ್ತ ನಿಯಮಿತ ಪೆಟ್ರೋಲಿಂಗ್ ನಡೆಸಿ ಭದ್ರತೆ ಪರಿಶೀಲಿಸಲಿದ್ದಾರೆ.
ಸಂಪರ್ಕಕ್ಕೆ
📞 ಪೊಲೀಸ್ ಸಹಾಯವಾಣಿ : 9480805400
📞 ಉಡುಪಿ ಎಸ್ಪಿ ಕಚೇರಿ : 0820-2526709
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm