ಬ್ರೇಕಿಂಗ್ ನ್ಯೂಸ್
13-05-26 04:04 pm HK News Staffer ಕರಾವಳಿ
ಮಂಗಳೂರು, ಮೇ 12 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು ₹22 ಕೋಟಿ ಹಣ ಜಮೆಯಾಗಿರುವ ಶಾಕಿಂಗ್ ಮಾಹಿತಿ ಬೆಳಕಿಗೆ ಬಂದಿದೆ. ಯೋಜನೆಯ ಹಣ ಸರಿಯಾಗಿ ಜಮೆಯಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿರುವ ನಡುವೆಯೇ ಈ ಬೆಳವಣಿಗೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮುಜುಗರಕ್ಕೀಡು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗವಾಗಿದ್ದು, ಸಭೆಯ ಅಧ್ಯಕ್ಷ ಭರತ್ ಮುಂಡೋಡಿ ತಕ್ಷಣ ಈ ಹಣವನ್ನು ಮರು ಪಾವತಿ ಮಾಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಕಚೇರಿಯಿಂದ ಬಂದ ಮಾಹಿತಿ ಪ್ರಕಾರ, ಬಳಕೆಯಲ್ಲಿಲ್ಲದ ಹಾಗೂ ಮೃತ ಫಲಾನುಭವಿಗಳ ಖಾತೆಗಳಿಗೆ ಸಹ ಹಣ ವರ್ಗಾವಣೆ ಮುಂದುವರಿದಿರುವುದು ಆತಂಕಕಾರಿ ಸಂಗತಿ ಎಂದು ಅವರು ಹೇಳಿದ್ದಾರೆ.
ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಮೃತಪಟ್ಟವರ ವಿವರಗಳನ್ನು ಸಂಗ್ರಹಿಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ.
ಇದರ ಮಧ್ಯೆ ಮತ್ತೊಂದು ಗಂಭೀರ ಅಂಶವೂ ಸಭೆಯಲ್ಲಿ ಬೆಳಕಿಗೆ ಬಂದಿದೆ. ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ವ್ಯತ್ಯಾಸಗಳೂ ಪತ್ತೆಯಾಗಿದ್ದು, ಇದು ದಾಖಲೆ ನಿರ್ವಹಣೆಯ ಗಂಭೀರ ಲೋಪವನ್ನು ಬಯಲಿಗೆಳೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಯಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರಿದ್ದು, ಇವರಲ್ಲಿ 3,82,178 ಮಂದಿ ಯೋಜನೆಗೆ ನೋಂದಾಯಿತರಾಗಿದ್ದಾರೆ. ಮೃತ ಫಲಾನುಭವಿಗಳ ಹೆಸರು, ಬ್ಯಾಂಕ್ ಖಾತೆ ವಿವರ ಹಾಗೂ ಮರಣ ದಾಖಲೆಗಳ ಆಧಾರದಲ್ಲಿ ಬ್ಯಾಂಕ್ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸಿ ಮುಂದಿನ ಹಣ ವರ್ಗಾವಣೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರತ್ ಮುಂಡೋಡಿ ತಿಳಿಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿರುವ ಮರಣ ದಾಖಲೆಗಳನ್ನೂ ಪರಿಶೀಲಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ.
ಸರ್ಕಾರದ ಜನಪರ ಯೋಜನೆಗಳು ನಿಜವಾದ ಅರ್ಹರಿಗೆ ತಲುಪಬೇಕಾದರೆ ದಾಖಲೆಗಳ ಸಮರ್ಪಕ ನಿರ್ವಹಣೆ ಹಾಗೂ ನಿರಂತರ ಪರಿಶೀಲನೆ ಅತ್ಯಗತ್ಯ. ಮೃತರ ಖಾತೆಗಳಿಗೆ ಹಣ ಜಮೆಯಾಗುವುದು ಆಡಳಿತಾತ್ಮಕ ಲೋಪವಷ್ಟೇ ಅಲ್ಲ, ಸಾರ್ವಜನಿಕ ಹಣದ ದುರುಪಯೋಗ. ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಅಪ್ಡೇಟ್ ಮಾಡುವ ವ್ಯವಸ್ಥೆ ಆಗಬೇಕೆಂಬ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm