ಬ್ರೇಕಿಂಗ್ ನ್ಯೂಸ್
13-05-26 04:04 pm HK News Staffer ಕರಾವಳಿ
ಮಂಗಳೂರು, ಮೇ 12 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು ₹22 ಕೋಟಿ ಹಣ ಜಮೆಯಾಗಿರುವ ಶಾಕಿಂಗ್ ಮಾಹಿತಿ ಬೆಳಕಿಗೆ ಬಂದಿದೆ. ಯೋಜನೆಯ ಹಣ ಸರಿಯಾಗಿ ಜಮೆಯಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿರುವ ನಡುವೆಯೇ ಈ ಬೆಳವಣಿಗೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮುಜುಗರಕ್ಕೀಡು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗವಾಗಿದ್ದು, ಸಭೆಯ ಅಧ್ಯಕ್ಷ ಭರತ್ ಮುಂಡೋಡಿ ತಕ್ಷಣ ಈ ಹಣವನ್ನು ಮರು ಪಾವತಿ ಮಾಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಕಚೇರಿಯಿಂದ ಬಂದ ಮಾಹಿತಿ ಪ್ರಕಾರ, ಬಳಕೆಯಲ್ಲಿಲ್ಲದ ಹಾಗೂ ಮೃತ ಫಲಾನುಭವಿಗಳ ಖಾತೆಗಳಿಗೆ ಸಹ ಹಣ ವರ್ಗಾವಣೆ ಮುಂದುವರಿದಿರುವುದು ಆತಂಕಕಾರಿ ಸಂಗತಿ ಎಂದು ಅವರು ಹೇಳಿದ್ದಾರೆ.
ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಮೃತಪಟ್ಟವರ ವಿವರಗಳನ್ನು ಸಂಗ್ರಹಿಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ.
ಇದರ ಮಧ್ಯೆ ಮತ್ತೊಂದು ಗಂಭೀರ ಅಂಶವೂ ಸಭೆಯಲ್ಲಿ ಬೆಳಕಿಗೆ ಬಂದಿದೆ. ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ವ್ಯತ್ಯಾಸಗಳೂ ಪತ್ತೆಯಾಗಿದ್ದು, ಇದು ದಾಖಲೆ ನಿರ್ವಹಣೆಯ ಗಂಭೀರ ಲೋಪವನ್ನು ಬಯಲಿಗೆಳೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಯಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರಿದ್ದು, ಇವರಲ್ಲಿ 3,82,178 ಮಂದಿ ಯೋಜನೆಗೆ ನೋಂದಾಯಿತರಾಗಿದ್ದಾರೆ. ಮೃತ ಫಲಾನುಭವಿಗಳ ಹೆಸರು, ಬ್ಯಾಂಕ್ ಖಾತೆ ವಿವರ ಹಾಗೂ ಮರಣ ದಾಖಲೆಗಳ ಆಧಾರದಲ್ಲಿ ಬ್ಯಾಂಕ್ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸಿ ಮುಂದಿನ ಹಣ ವರ್ಗಾವಣೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರತ್ ಮುಂಡೋಡಿ ತಿಳಿಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿರುವ ಮರಣ ದಾಖಲೆಗಳನ್ನೂ ಪರಿಶೀಲಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ.
ಸರ್ಕಾರದ ಜನಪರ ಯೋಜನೆಗಳು ನಿಜವಾದ ಅರ್ಹರಿಗೆ ತಲುಪಬೇಕಾದರೆ ದಾಖಲೆಗಳ ಸಮರ್ಪಕ ನಿರ್ವಹಣೆ ಹಾಗೂ ನಿರಂತರ ಪರಿಶೀಲನೆ ಅತ್ಯಗತ್ಯ. ಮೃತರ ಖಾತೆಗಳಿಗೆ ಹಣ ಜಮೆಯಾಗುವುದು ಆಡಳಿತಾತ್ಮಕ ಲೋಪವಷ್ಟೇ ಅಲ್ಲ, ಸಾರ್ವಜನಿಕ ಹಣದ ದುರುಪಯೋಗ. ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಅಪ್ಡೇಟ್ ಮಾಡುವ ವ್ಯವಸ್ಥೆ ಆಗಬೇಕೆಂಬ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am