ಬ್ರೇಕಿಂಗ್ ನ್ಯೂಸ್
13-05-26 11:02 pm HK News Desk ಕರಾವಳಿ
ಮಂಗಳೂರು, ಮೇ 13: ಬೀಗ ಹಾಕಿರುವ ಮನೆಗಳಲ್ಲಿ ಸಂಭಾವ್ಯ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲು ರಾಜ್ಯದ ವಿವಿಧೆಡೆ ಜಾರಿಗೆ ಬಂದಿರುವ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್' (ಎಲ್ಎಚ್ಬಿಎಸ್) ಅನ್ನು ಉಡುಪಿ ನಂತರ ಇದೀಗ ಮಂಗಳೂರು ಕಮಿನಷರೆಟ್ ವ್ಯಾಪ್ತಿಯಲ್ಲೂ ಅನುಷ್ಠಾನ ಮಾಡಲಾಗಿದೆ.
ಸಮುದಾಯ ಪೊಲೀಸ್ ಉಪಕ್ರಮದ ಭಾಗವಾಗಿರುವ "ಲಾಕ್ಸ್ ಹೌಸ್ ಬೀಟ್ ಸಿಸ್ಟಮ್' ಯೋಜನೆ ಮನೆಯನ್ನು ಕಳ್ಳತನದಿಂದ ರಕ್ಷಿಸಲು ಸಹಾಯ ಮಾಡಲಿದೆ. ಬೀಗ ಹಾಕಿರುವ ಮನೆಗಳ ಮೇಲೆ ನಿಯಮಿತ ನಿಗಾ ವಹಿಸುವ ಮೂಲಕ ಮನೆಯ ಮಾಲಕರು ವಾಪಾಸು ಬರುವವ ವರೆಗೆ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲಾಗಿತ್ತದೆ.
ಮನೆ ಮಾಲಕರು ಪ್ರವಾಸ, ಇತರ ಕಾರ್ಯಕ್ರಮಗಳಿಗಾಗಿ ಮನೆಗೆ ಬೀಗ ಹಾಕಿ ತಾತ್ಕಾಲಿಕವಾಗಿ ಹೊರಗೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದರಿಂದ ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗಲಿದೆ. ಈ ಯೋಜನೆ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರ್ಟ್ ಮೆಂಟ್ ಅಥವಾ ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ನೀಡಿದವರ ಮನೆಯ ಪರಿಸರದಲ್ಲಿ ಪೊಲೀಸ್ ಬೀಟ್ ಹೆಚ್ಚಿಸಲಾಗುತ್ತದೆ. ರಾತ್ರಿಯ ಹೊತ್ತು ಪೊಲೀಸರು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸುತ್ತಾರೆ. ಮನೆಯ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದರೆ ಗಮನಹರಿಸಲಿದ್ದಾರೆ.
ಯೋಜನೆಯ ಉದ್ದೇಶಗಳು;
ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ತಡೆಗಟ್ಟುವುದು.
ರಾತ್ರಿ ಗಸ್ತನ್ನು ಹೆಚ್ಚು ಪರಿಣಾಮಕಾರಿ ಆಗಿಸುವುದು.
ಅಪರಾಧ ತಡೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಳ
ಸಾರ್ವಜನಿಕರು ಏನು ಮಾಡಬೇಕು ?
ಸಾರ್ವಜನಿಕರು ಮನೆಯನ್ನು ಕೆಲ ದಿನಗಳ ಮಟ್ಟಿಗೆ ಖಾಲಿ ಬಿಟ್ಟು ಹೋಗಲು ನಿರ್ಧರಿಸಿದ್ದರೆ ಅಂತಹ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ.ನ ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದು. ವಾಟ್ಸ್ ಆ್ಯಪ್ ನಲ್ಲಿ ಮನೆ ಮಾಲಕರ ಹೆಸರು, ಪೂರ್ಣ ವಿಳಾಸ, ಗೂಗಲ್ ಲೊಕೇಶನ್, ಮನೆಯಲ್ಲಿ ಇಲ್ಲದಿರುವ ದಿನಾಂಕ ಹಾಗೂ ಮನೆಯೊಂದಿಗೆ ಒಂದು ಸೆಲ್ಪಿಯನ್ನು ಕಳುಹಿಸಬೇಕು. ವಾಟ್ಸ್ ಆ್ಯಪ್ ಕಳುಹಿಸಬೇಕಾದ ಸಂಖ್ಯೆ 9480802321.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm