ಬ್ರೇಕಿಂಗ್ ನ್ಯೂಸ್
13-05-26 11:02 pm HK News Desk ಕರಾವಳಿ
ಮಂಗಳೂರು, ಮೇ 13: ಬೀಗ ಹಾಕಿರುವ ಮನೆಗಳಲ್ಲಿ ಸಂಭಾವ್ಯ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲು ರಾಜ್ಯದ ವಿವಿಧೆಡೆ ಜಾರಿಗೆ ಬಂದಿರುವ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್' (ಎಲ್ಎಚ್ಬಿಎಸ್) ಅನ್ನು ಉಡುಪಿ ನಂತರ ಇದೀಗ ಮಂಗಳೂರು ಕಮಿನಷರೆಟ್ ವ್ಯಾಪ್ತಿಯಲ್ಲೂ ಅನುಷ್ಠಾನ ಮಾಡಲಾಗಿದೆ.
ಸಮುದಾಯ ಪೊಲೀಸ್ ಉಪಕ್ರಮದ ಭಾಗವಾಗಿರುವ "ಲಾಕ್ಸ್ ಹೌಸ್ ಬೀಟ್ ಸಿಸ್ಟಮ್' ಯೋಜನೆ ಮನೆಯನ್ನು ಕಳ್ಳತನದಿಂದ ರಕ್ಷಿಸಲು ಸಹಾಯ ಮಾಡಲಿದೆ. ಬೀಗ ಹಾಕಿರುವ ಮನೆಗಳ ಮೇಲೆ ನಿಯಮಿತ ನಿಗಾ ವಹಿಸುವ ಮೂಲಕ ಮನೆಯ ಮಾಲಕರು ವಾಪಾಸು ಬರುವವ ವರೆಗೆ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲಾಗಿತ್ತದೆ.
ಮನೆ ಮಾಲಕರು ಪ್ರವಾಸ, ಇತರ ಕಾರ್ಯಕ್ರಮಗಳಿಗಾಗಿ ಮನೆಗೆ ಬೀಗ ಹಾಕಿ ತಾತ್ಕಾಲಿಕವಾಗಿ ಹೊರಗೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದರಿಂದ ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗಲಿದೆ. ಈ ಯೋಜನೆ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರ್ಟ್ ಮೆಂಟ್ ಅಥವಾ ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ನೀಡಿದವರ ಮನೆಯ ಪರಿಸರದಲ್ಲಿ ಪೊಲೀಸ್ ಬೀಟ್ ಹೆಚ್ಚಿಸಲಾಗುತ್ತದೆ. ರಾತ್ರಿಯ ಹೊತ್ತು ಪೊಲೀಸರು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸುತ್ತಾರೆ. ಮನೆಯ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದರೆ ಗಮನಹರಿಸಲಿದ್ದಾರೆ.
ಯೋಜನೆಯ ಉದ್ದೇಶಗಳು;
ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ತಡೆಗಟ್ಟುವುದು.
ರಾತ್ರಿ ಗಸ್ತನ್ನು ಹೆಚ್ಚು ಪರಿಣಾಮಕಾರಿ ಆಗಿಸುವುದು.
ಅಪರಾಧ ತಡೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಳ
ಸಾರ್ವಜನಿಕರು ಏನು ಮಾಡಬೇಕು ?
ಸಾರ್ವಜನಿಕರು ಮನೆಯನ್ನು ಕೆಲ ದಿನಗಳ ಮಟ್ಟಿಗೆ ಖಾಲಿ ಬಿಟ್ಟು ಹೋಗಲು ನಿರ್ಧರಿಸಿದ್ದರೆ ಅಂತಹ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ.ನ ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದು. ವಾಟ್ಸ್ ಆ್ಯಪ್ ನಲ್ಲಿ ಮನೆ ಮಾಲಕರ ಹೆಸರು, ಪೂರ್ಣ ವಿಳಾಸ, ಗೂಗಲ್ ಲೊಕೇಶನ್, ಮನೆಯಲ್ಲಿ ಇಲ್ಲದಿರುವ ದಿನಾಂಕ ಹಾಗೂ ಮನೆಯೊಂದಿಗೆ ಒಂದು ಸೆಲ್ಪಿಯನ್ನು ಕಳುಹಿಸಬೇಕು. ವಾಟ್ಸ್ ಆ್ಯಪ್ ಕಳುಹಿಸಬೇಕಾದ ಸಂಖ್ಯೆ 9480802321.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm