ಬ್ರೇಕಿಂಗ್ ನ್ಯೂಸ್
14-05-26 10:48 pm HK News Staffer ಕರಾವಳಿ
ಉಳ್ಳಾಲ, ಮೇ 14: ಉಳ್ಳಾಲ ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆಯನ್ನು ಹೊತ್ತೊಯ್ಯುತ್ಯಿದ್ದ ಕ್ಯಾಂಟರ್ ನಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಾಜ ರಸ್ತೆಯಲ್ಲೇ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಕೋಟೆಪುರದಲ್ಲಿ ನಾಯಿಕೊಡೆಗಳಂತೆ ಫಿಶ್ ಮೀಲ್ ಫ್ಯಾಕ್ಟರಿಗಳು ತಲೆ ಎತ್ತಿದ್ದು ಉಳ್ಳಾಲ ನಗರವನ್ನ ಅನಧಿಕೃತ ಕೈಗಾರಿಕಾ ಪ್ರದೇಶವನ್ನಾಗಿಸಿದೆ. ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ಯೊಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿದೆ. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರಲ್ಲದೆ, ತ್ರಿಚಕ್ರ ವಾಹನ ಸವಾರರು ಕೂಡ ರಸ್ತೆಯಲ್ಲಿ ಜಾರಿ ಬಿದ್ದಿದ್ದಾರೆ.




ಉದ್ರಿಕ್ತ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರನ್ನ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಕ್ಯಾಂಟರಿಂದ ಲಕ್ಷಗಟ್ಟಲೆ ಮೌಲ್ಯದ ಆಯಿಲ್ ಸೋರಿಕೆಯಾಗುತ್ತಲೇ ಇದ್ದು ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗುತ್ತಿದೆ.
ಘಟನೆಯಿಂದ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಏಕಮುಖ ರಸ್ತೆಯ ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸೋರಿಕೆಯಾಗಿರುವ ಭಾರೀ ಜಿಡ್ಡಿನ ಫಿಶ್ ಆಯಿಲನ್ನ ಶುದ್ಧಗೊಳಿಸುವುದು ಹೇಗೆಂದು ಪೊಲೀಸರು ಜನಸಾಮಾನ್ಯರಲ್ಲಿ ವಿಚಾರಿಸುತ್ತಿದ್ದಾರೆ.
ಉಳ್ಳಾಲ ನಗರ ಪ್ರದೇಶದಲ್ಲಿ ತಲೆ ಎತ್ತಿರುವ ಅನಧಿಕೃತ ಫಿಶ್ ಮೀಲ್ ಫ್ಯಾಕ್ಟರಿಗಳಿಂದ ಇಲ್ಲಿನ ಜನರು ದಿನ ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಫ್ಯಾಕ್ಟರಿಗಳ ಗಬ್ಬು ವಾಸನೆ ಉಳ್ಳಾಲ ಮಾತ್ರವಲ್ಲದೆ ಸಮೀಪದ ಮಂಗಳಾದೇವಿ ಪರಿಸರಕ್ಕೂ ವ್ಯಾಪಿಸಿದೆ. ಇದೀಗ ಭಾರೀ ಪ್ರಮಾಣದಲ್ಲಿ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆಯಾಗಿರುವುದರಿಂದ ಇಡೀ ಉಳ್ಳಾಲವೇ ಗಬ್ಬು ನಾರುವಂತಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am