ಬ್ರೇಕಿಂಗ್ ನ್ಯೂಸ್
14-05-26 10:48 pm HK News Staffer ಕರಾವಳಿ
ಉಳ್ಳಾಲ, ಮೇ 14: ಉಳ್ಳಾಲ ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆಯನ್ನು ಹೊತ್ತೊಯ್ಯುತ್ಯಿದ್ದ ಕ್ಯಾಂಟರ್ ನಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಾಜ ರಸ್ತೆಯಲ್ಲೇ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಕೋಟೆಪುರದಲ್ಲಿ ನಾಯಿಕೊಡೆಗಳಂತೆ ಫಿಶ್ ಮೀಲ್ ಫ್ಯಾಕ್ಟರಿಗಳು ತಲೆ ಎತ್ತಿದ್ದು ಉಳ್ಳಾಲ ನಗರವನ್ನ ಅನಧಿಕೃತ ಕೈಗಾರಿಕಾ ಪ್ರದೇಶವನ್ನಾಗಿಸಿದೆ. ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ಯೊಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿದೆ. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರಲ್ಲದೆ, ತ್ರಿಚಕ್ರ ವಾಹನ ಸವಾರರು ಕೂಡ ರಸ್ತೆಯಲ್ಲಿ ಜಾರಿ ಬಿದ್ದಿದ್ದಾರೆ.




ಉದ್ರಿಕ್ತ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರನ್ನ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಕ್ಯಾಂಟರಿಂದ ಲಕ್ಷಗಟ್ಟಲೆ ಮೌಲ್ಯದ ಆಯಿಲ್ ಸೋರಿಕೆಯಾಗುತ್ತಲೇ ಇದ್ದು ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗುತ್ತಿದೆ.
ಘಟನೆಯಿಂದ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಏಕಮುಖ ರಸ್ತೆಯ ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸೋರಿಕೆಯಾಗಿರುವ ಭಾರೀ ಜಿಡ್ಡಿನ ಫಿಶ್ ಆಯಿಲನ್ನ ಶುದ್ಧಗೊಳಿಸುವುದು ಹೇಗೆಂದು ಪೊಲೀಸರು ಜನಸಾಮಾನ್ಯರಲ್ಲಿ ವಿಚಾರಿಸುತ್ತಿದ್ದಾರೆ.
ಉಳ್ಳಾಲ ನಗರ ಪ್ರದೇಶದಲ್ಲಿ ತಲೆ ಎತ್ತಿರುವ ಅನಧಿಕೃತ ಫಿಶ್ ಮೀಲ್ ಫ್ಯಾಕ್ಟರಿಗಳಿಂದ ಇಲ್ಲಿನ ಜನರು ದಿನ ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಫ್ಯಾಕ್ಟರಿಗಳ ಗಬ್ಬು ವಾಸನೆ ಉಳ್ಳಾಲ ಮಾತ್ರವಲ್ಲದೆ ಸಮೀಪದ ಮಂಗಳಾದೇವಿ ಪರಿಸರಕ್ಕೂ ವ್ಯಾಪಿಸಿದೆ. ಇದೀಗ ಭಾರೀ ಪ್ರಮಾಣದಲ್ಲಿ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆಯಾಗಿರುವುದರಿಂದ ಇಡೀ ಉಳ್ಳಾಲವೇ ಗಬ್ಬು ನಾರುವಂತಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am