ಬ್ರೇಕಿಂಗ್ ನ್ಯೂಸ್
18-05-26 10:47 pm HK News Desk ಕರಾವಳಿ
ಮಂಗಳೂರು, ಮೇ 18 : ಮಂಗಳೂರು ನಗರ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಒಟ್ಟು 11.63 ಕೋಟಿ ರೂ. ಅಧಿಕ ಅನುದಾನ ಬಿಡುಗಡೆ ಮಾಡಿದೆ.
ಬೈಕಂಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್
ಬ್ಲ್ಯಾಕ್ ಸ್ಪಾಟ್ ಆಗಿ ಮಾರ್ಪಟ್ಟಿದ್ದ ಬೈಕಂಪಾಡಿ ಜಂಕ್ಷನ್ ಸುಗಮ ಹಾಗೂ ಸುರಕ್ಷಿತ ವಾಹನ ಸಂಚಾರಕ್ಕಾಗಿ ಅಂಡರ್ ಪಾಸ್ ಆಗಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಕೇಳಿಬಂದಿತ್ತು. ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ತೆರಳುವ ವಾಹನಗಳ ಅನುಕೂಲಕ್ಕಾಗಿ ಬೈಕಂಪಾಡಿ ಜಂಕ್ಷನ್ನಲ್ಲಿ 7.09 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ (LVUP) ನಿರ್ಮಾಣಕ್ಕೆ ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ. ಈ ಅಂಡರ್ಪಾಸ್ ನಿರ್ಮಾಣದಿಂದಾಗಿ ವಾಹನಗಳು ಹೆದ್ದಾರಿಯಲ್ಲಿ ತಿರುವು ಪಡೆಯುವ ಬದಲು ಅಂಡರ್ಪಾಸ್ ಮೂಲಕವೇ ಕೈಗಾರಿಕಾ ಪ್ರದೇಶದ ಕಡೆಗೆ ಚಲಿಸಬಹುದಾಗಿದೆ. ಜತೆಗೆ ಹೆದ್ದಾರಿಯಲ್ಲಿಯೂ ಬೈಕಂಪಾಡಿ ಬಳಿ ಸುಗಮವಾಗಿ ಉಡುಪಿ ಕಡೆಗೆ ವಾಹನಗಳು ಸಂಚರಿಸುವುದಕ್ಕೆ ಅನುಕೂಲವಾಗಲಿದೆ.
ಕೂಳೂರು ಸೇತುವೆ ಬಳಿ ಅಂಡರ್ಪಾಸ್
ರಾಷ್ಟ್ರೀಯ ಹೆದ್ದಾರಿ 66ರ ಕೆ.ಐ.ಒ.ಸಿ.ಎಲ್ (KIOCL) ಜಂಕ್ಷನ್ ಮತ್ತು ಕೂಳೂರು ಸೇತುವೆ ಬಳಿ 4.54 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಈ ಭಾಗದಲ್ಲಿ ಅಂಡರ್ಪಾಸ್ ನಿರ್ಮಿಸುವುದರಿಂದ ತಣ್ಣೀರುಬಾವಿ ಬೀಚ್ ಹಾಗೂ ಎಂ.ಎಸ್.ಇ.ಝೆಡ್ (MSEZ/SCZ) ಕಡೆಗೆ ಚಲಿಸುವ ವಾಹನಗಳ ದಟ್ಟಣೆಯನ್ನು ನಿವಾರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಮೂಲಸೌಕರ್ಯದ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಿ, ಮಹತ್ವದ ಕಾಮಗಾರಿಗಳಿಗೆ ಅನುದಾನ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ ಸಲ್ಲಿದ್ದಾರೆ.
ಎನ್ಎಂಪಿಟಿ ಭಾಗದ ರಸ್ತೆಯು ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಯಲ್ಲಿದ್ದು ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು ಹಾಗೂ ನಿಧಿಯ ಕೊರತೆಯಿಂದ ಹೆದ್ದಾರಿ ಅಭಿವೃದ್ಧಿಗೆ ತೀವ್ರ ಸವಾಲು ಎದುರಾಗಿತ್ತು. ಈ ಬಗ್ಗೆ ಸತತ ಪ್ರಯತ್ನ ನಡೆಸಿ, ಪೋರ್ಟ್ ವ್ಯಾಪ್ತಿಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕೂಳೂರು ಸೇತುವೆ ಬಳಿ ಮತ್ತು ಬೈಕಂಪಾಡಿ ಜಂಕ್ಷನ್ ಬಳಿ ಕೆಳಸೇತುವೆ ನಿರ್ಮಾಣದಿಂದ ಮಂಗಳೂರು-ಉಡುಪಿ ನಡುವೆ ಸಂಚರಿಸುವ ಸಾರ್ವಜನಿಕರಿಗೆ ಸುಗಮ ಸಂಚಾರ ಸಾಧ್ಯವಾಗಲಿದೆ. ಜೊತೆಗೆ ಬೈಕಂಪಾಡಿ ಕೈಗಾರಿಕಾ ವಲಯ ಹಾಗೂ ಎಂ.ಎಸ್.ಇ.ಝೆಡ್ ಭಾಗಕ್ಕೆ ಸಂಚರಿಸುವವರಿಗೂ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm