ಬ್ರೇಕಿಂಗ್ ನ್ಯೂಸ್
19-05-26 10:44 am HK News Staffer ಕರಾವಳಿ
ಮಂಗಳೂರು, ಮೇ 19: ಒಂದು ರೂಪಾಯಿಗೆ ಒಂದು ಶರ್ಟ್, 999 ರೂ.ಗೆ ಮೂರು ಬ್ಯಾಗಿ ಪ್ಯಾಂಟ್. ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿ ಶುಭಾರಂಭಕ್ಕೆ ಹೀಗೊಂದು ಆಫರ್ ನೀಡಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಆಫರ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊನ್ನೆ ಮೇ 17ರ ಭಾನುವಾರ ಜನರು ಸಾಗರೋಪಾದಿಯಲ್ಲಿ ಮುಗಿಬಿದ್ದು ಜಾಮ್ ಟೈಟ್ ಆಗಿತ್ತು.
ಮಂಗಳೂರು ಹೊರವಲಯದ ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿಯ ಉದ್ಘಾಟನೆಯನ್ನು ಮೇ 17ರ ಭಾನುವಾರ ಏರ್ಪಡಿಸಲಾಗಿತ್ತು. ಜನರನ್ನು ಆಕರ್ಷಿಸಲು ಎಂಬಂತೆ ಒಂದು ರೂ.ಗೆ ಒಂದು ಆಕರ್ಷಕ ಶರ್ಟ್ ಎನ್ನುವ ಆಫರ್ ಇರೋದಾಗಿ ವಿಡಿಯೋ ಹರಿಯಬಿಡಲಾಗಿತ್ತು. ವಿಡಿಯೋ ಇನ್ ಸ್ಟಾ ಗ್ರಾಮ್ ಪೇಜ್ ಗಳಲ್ಲಿ ವೈರಲ್ ಆಗಿದ್ದು ಯುವ ಜನರು ಭಾರೀ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ, ಬಟ್ಟೆ ಅಂಗಡಿಯಲ್ಲಿ ಕಂಟ್ರೋಲ್ ಮಾಡಲಾಗದೆ ಜನರನ್ನು ಒಳಗೆ ಹೊರಗೆ ಕಳಿಸುವುದೇ ಅಸಾಧ್ಯ ಎನ್ನುವಂತಾಗಿತ್ತು.

ವಿಚಿತ್ರ ಅಂದರೆ, ಬಟ್ಟೆ ಅಂಗಡಿ ಉದ್ಘಾಟನೆಗೆಂದು ಬಂದಿದ್ದ ಶಾಸಕ ಉಮಾನಾಥ ಕೋಟ್ಯಾನ್ ಕೂಡ ಇವರ ಎಡೆಯಲ್ಲಿ ಸಿಕ್ಕಿಬೀಳುವಂತಾಗಿತ್ತು. ಜನರ ನಡುವೆ ಸಿಕ್ಕಿಬಿದ್ದು ಶಾಸಕರೇ ಅಪ್ಪಚ್ಚಿಯಾಗಿದ್ದು, ಅಲ್ಲಿಂದ ಹೊರಬರುವುದಕ್ಕೆ ಉಸ್ಸಪ್ಪಾ ಎನ್ನುವಂತಾಗಿತ್ತು. ಉಚಿತ ಕೊಡುತ್ತೇವೆ ಅಂದ್ರೆ ಎಷ್ಟೊಂದು ಜನ ಮುಗಿಬೀಳುತ್ತಾರೆ ಅನ್ನುವುದಕ್ಕೆ ಇಲ್ಲಿ ಸೇರಿದ್ದ ಜನರೇ ಸಾಕ್ಷಿಯಾಗಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಬಂದು ಸೇರಿದ್ದು, ಬ್ಯಾಗಿ ಪ್ಯಾಂಟ್, ಕಂಪನಿ ಶರ್ಟ್ ಗಳನ್ನು ಕೊಳ್ಳಲು ಮುಂದಾಗಿದ್ದರು. ಒಂದೇ ದಿನ ಅಂಗಡಿ ಮಳಿಗೆ ಖಾಲಿಯಾಗುವಷ್ಟರ ಮಟ್ಟಿಗೆ ಜನ ಸೇರಿದ್ದರು. ಆದರೆ ಮೊದಲು ಬಂದ ನೂರು ಜನರಿಗೆ ಮಾತ್ರ ಒಂದು ರೂ. ಶರ್ಟ್ ಆಫರ್ ಇತ್ತು. ಆದರೆ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು ತೀವ್ರ ನೂಕುನುಗ್ಗಲು ಉಂಟಾಗಿತ್ತು.
₹1 shirt offer creates chaos in #Bajpe, #Mangaluru! Huge crowd gathers at a clothing store after viral social media promo. Even #MLAUmanathKotian got caught in the rush during the inauguration. Only first 100 customers were eligible for the offer. #Mangaluru #Bajpe pic.twitter.com/Mkx29731db
— Headline Karnataka (@hknewsonline) May 19, 2026
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm