ಬ್ರೇಕಿಂಗ್ ನ್ಯೂಸ್
19-05-26 05:57 pm HK News Staffer ಕರಾವಳಿ
ಮಂಗಳೂರು, ಮೇ 19: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಂದರು ನಗರಿ ಮಂಗಳೂರಿನಲ್ಲಿ ಬೆಚ್ಚಿಬೀಳಿಸುವಂತಹ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ನಗರದ ಕಾವೂರು ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ ಮಿಶ್ರಿತ ನೀರು ಮೇಲೇಳುತ್ತಿದ್ದು, ಸ್ಥಳೀಯ ನಿವಾಸಿಗಳು ಭಾರೀ ಆತಂಕಕ್ಕೊಳಗಾಗಿದ್ದಾರೆ.
ಬಾವಿಯ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಬರೋಬ್ಬರಿ ಶೇ.28 ರಷ್ಟು ಡೀಸೆಲ್ ಅಂಶ ಇರುವುದು ಪ್ರಯೋಗಾಲಯ ವರದಿಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆ ಇಡೀ ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದ್ದು, ಅಂತರ್ಜಲ ಕಲುಷಿತವಾಗಿರುವ ಭೀತಿ ಜನರಲ್ಲಿ ಮನೆ ಮಾಡಿದೆ.
ಬಾವಿ ಖಾಲಿ ಮಾಡಿದರೂ ಮತ್ತೆ ಡೀಸೆಲ್!
ಸ್ಥಳೀಯರ ಪ್ರಕಾರ, ಬಾವಿಯ ನೀರನ್ನು ಮೋಟಾರ್ ಮೂಲಕ ಸಂಪೂರ್ಣ ಖಾಲಿ ಮಾಡಿ ಸ್ವಚ್ಛಗೊಳಿಸಿದರೂ ಕೆಲವೇ ಗಂಟೆಗಳಲ್ಲಿ ಮತ್ತೆ ಡೀಸೆಲ್ ಮಿಶ್ರಿತ ನೀರು ಮೇಲೇಳುತ್ತಿದೆ. ನೀರಿನ ಮೇಲ್ಭಾಗದಲ್ಲಿ ದಪ್ಪನೆಯ ಎಣ್ಣೆ ಪದರ ಕಾಣಿಸಿಕೊಳ್ಳುತ್ತಿದ್ದು, ತೀವ್ರ ದುರ್ವಾಸನೆಯೂ ಬರುತ್ತಿದೆ.
ಇದರಿಂದಾಗಿ ಆ ಮನೆಗಳ ನಿವಾಸಿಗಳಿಗೆ ಕುಡಿಯುವ ನೀರು ಮಾತ್ರವಲ್ಲದೆ, ಅಡುಗೆ, ಪಾತ್ರೆ ತೊಳೆಯುವುದು ಸೇರಿದಂತೆ ದಿನನಿತ್ಯದ ಬಳಕೆಯ ನೀರಿಗೂ ಭಾರೀ ಸಮಸ್ಯೆ ಎದುರಾಗಿದೆ. ಸದ್ಯ ಟ್ಯಾಂಕರ್ ನೀರಿನ ಮೇಲೆಯೇ ಅವಲಂಬಿತರಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪೆಟ್ರೋಲ್ ಬಂಕ್ನಿಂದ ಸೋರಿಕೆ?
ಸಂತ್ರಸ್ತರ ಮನೆಗಳ ಸಮೀಪದಲ್ಲೇ ಪೆಟ್ರೋಲ್ ಬಂಕ್ ಇದ್ದು, ಅದರ ಅಂಡರ್ಗ್ರೌಂಡ್ ಡೀಸೆಲ್ ಟ್ಯಾಂಕ್ನಿಂದ ಸೋರಿಕೆ ಆಗಿ ಅಂತರ್ಜಲ ಸೇರಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಆದರೆ, ಈ ಆರೋಪವನ್ನು ಪೆಟ್ರೋಲ್ ಬಂಕ್ ಮಾಲೀಕರು ತಳ್ಳಿಹಾಕಿದ್ದಾರೆ.
“ನಮ್ಮ ಡೀಸೆಲ್ ಸ್ಟಾಕ್ನಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಟ್ಯಾಂಕ್ ಲೀಕ್ ಆಗಿದ್ದರೆ ಪ್ರಮಾಣದಲ್ಲಿ ವ್ಯತ್ಯಾಸ ಕಾಣಿಸಿಕೊಳ್ಳಬೇಕಿತ್ತು. ನಮ್ಮಿಂದ ಸಮಸ್ಯೆ ಆಗಿಲ್ಲ,” ಎಂದು ಬಂಕ್ ಸಿಬ್ಬಂದಿ ಸ್ಪಷ್ಟನೆ ನೀಡಿದ್ದಾರೆ.
‘ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದರೆ ಉರಿಯುತ್ತಿದೆ' ;
ಸಂತ್ರಸ್ತರಾದ ಸದಾಶಿವ ಎಂಬವರು ಮಾತನಾಡಿ, “ಮೊದಲು ನೀರಿನಲ್ಲಿ ವಿಚಿತ್ರ ವಾಸನೆ ಬರುತ್ತಿತ್ತು. ನಂತರ ಪರಿಶೀಲಿಸಿದಾಗ ಡೀಸೆಲ್ ಮಿಶ್ರಣ ಇರುವುದನ್ನು ಗಮನಿಸಿದ್ದೇವೆ. ಬಾವಿಯನ್ನು ಸಂಪೂರ್ಣ ಕ್ಲೀನ್ ಮಾಡಿದರೂ ಮತ್ತೆ ಡೀಸೆಲ್ ಬರುತ್ತಿದೆ. ಬಾವಿಯಿಂದ ತೆಗೆದ ನೀರಿಗೆ ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದರೆ ಅದು ಉರಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬದುಕುವುದು ತುಂಬಾ ಭಯಾನಕವಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
“ಈಗ ನಾವು ಹೊರಗಿನಿಂದ ಟ್ಯಾಂಕರ್ ನೀರು ತರಿಸಿ ಬಕೆಟ್ಗಳಲ್ಲಿ ಸಂಗ್ರಹಿಸಿ ಬಳಸುತ್ತಿದ್ದೇವೆ. ಅಧಿಕಾರಿಗಳು ಕೇವಲ ವರದಿ ಪಡೆದು ಸುಮ್ಮನಾಗದೇ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ;
ಆರೋಗ್ಯ ಇಲಾಖೆ ಅಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದ್ದು, ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಿದ್ದಾರೆ. ಆದರೂ ಪಾಲಿಕೆ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಅಂತರ್ಜಲ ಕಲುಷಿತ ಭೀತಿ
ಈ ರಹಸ್ಯ ಸೋರಿಕೆ ಮುಂದುವರಿದರೆ ಸುತ್ತಮುತ್ತಲಿನ ಪ್ರದೇಶಗಳ ಅಂತರ್ಜಲ ಸಂಪೂರ್ಣ ಕಲುಷಿತಗೊಳ್ಳುವ ಅಪಾಯವಿದೆ ಎಂಬ ಆತಂಕ ವ್ಯಕ್ತವಾಗಿದೆ. ಡೀಸೆಲ್ ಯಾವ ಮೂಲದಿಂದ ಭೂಮಿಯೊಳಗೆ ಸೇರಿದೆ? ಪೆಟ್ರೋಲ್ ಬಂಕ್ ಟ್ಯಾಂಕ್ ಸೋರಿಕೆಯೇ ಕಾರಣವೇ? ಅಥವಾ ಬೇರೆ ಮೂಲವಿದೆಯೇ? ಎಂಬುದರ ಕುರಿತು ತಕ್ಷಣ ಸಮಗ್ರ ತನಿಖೆ ನಡೆಸಬೇಕೆಂದು ಸ್ಥಳೀಯರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm