ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

19-05-26 10:47 pm       HK News Desk   ಕರಾವಳಿ

ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಎಂಬಲ್ಲಿ ನಡೆದಿದೆ.‌

ಬೆಳ್ತಂಗಡಿ, ‌ಮೇ 19: ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಎಂಬಲ್ಲಿ ನಡೆದಿದೆ.‌ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಮೃತ ಯುವಕ. 

ಸಂಜೆ 4 ಗಂಟೆ ಸುಮಾರಿಗೆ ಏಳು ಮಂದಿಯಿದ್ದ ವಿದ್ಯಾರ್ಥಿಗಳ ತಂಡ ಪಜಿರಡ್ಕ ಬಳಿ ನೇತ್ರಾವತಿ ನದಿಗೆ ಈಜಲು ತೆರಳಿದ್ದರು. ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು ಇವರ ಪೈಕಿ ಶ್ರೀಪೂರ್ಣ ನದಿಯಲ್ಲಿ ನೀರಿನ ಆಳ ತಿಳಿಯದೆ ಮೃತಪಟ್ಟಿದ್ದಾನೆ. 

ಘಟನಾ ಸ್ಥಳದಲ್ಲಿ ಸ್ಥಳೀಯರು, ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಶೋಧ ನಡೆಸಿ ಶವ ಮೇಲೆತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.