ಬ್ರೇಕಿಂಗ್ ನ್ಯೂಸ್
20-05-26 06:51 pm HK News Staffer ಕರಾವಳಿ
ಮಂಗಳೂರು, ಮೇ 20: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆ ಮೇ 25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಭಾರಿ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಮತ್ತು ಕೇರಳ ಕರಾವಳಿ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಗಾಳಿಯ ವೇಗ 60 ಕಿ.ಮೀ ವರೆಗೆ ತಲುಪಬಹುದು ಎಂದು ತಿಳಿಸಲಾಗಿದೆ. ಇದೇ ವೇಳೆ ಲಕ್ಷದ್ವೀಪ, ಮಾಲ್ಡೀವ್ಸ್ ಹಾಗೂ ಕೊಮೊರಿನ್ ಸಮುದ್ರ ಪ್ರದೇಶಗಳಲ್ಲೂ ಹವಾಮಾನ ತೀವ್ರ ಅಸ್ಥಿರವಾಗುವ ನಿರೀಕ್ಷೆ ಇದೆ.
ಸೊಮಾಲಿಯಾ ಕರಾವಳಿ ಮತ್ತು ನೈಋತ್ಯ ಅರಬ್ಬೀ ಸಮುದ್ರ ಭಾಗದಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದ ಗಾಳಿ ಬೀಸಲಿದ್ದು, ಕೆಲವೊಮ್ಮೆ ಅದು 65 ಕಿ.ಮೀ ವೇಗಕ್ಕೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆ ಕರ್ನಾಟಕ, ಕೇರಳ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಸಮುದ್ರದಲ್ಲಿರುವ ಮೀನುಗಾರರು ತಕ್ಷಣ ದಡ ಸೇರಬೇಕು ಎಂದು ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿ, ಮನ್ನಾರ್ ಕೊಲ್ಲಿ ಹಾಗೂ ಅಂಡಮಾನ್ ಸಮುದ್ರ ಭಾಗಗಳಲ್ಲೂ ಮುಂದಿನ ಐದು ದಿನಗಳ ಕಾಲ ಪ್ರಕ್ಷುಬ್ಧ ವಾತಾವರಣ ಇರಲಿದ್ದು, ಶ್ರೀಲಂಕಾ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಕೂಡ ಗಾಳಿಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ಸೇರಿದಂತೆ ಕರಾವಳಿ ರಾಜ್ಯಗಳಿಗೆ ತುರ್ತು ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ರಾಜ್ಯಗಳ ವಿಪತ್ತು ನಿರ್ವಹಣಾ ಕೇಂದ್ರಗಳಿಗೂ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಅಗತ್ಯ. ಮೀನುಗಾರರು ಮತ್ತು ಕರಾವಳಿ ಪ್ರದೇಶದ ನಿವಾಸಿಗಳು ಯಾವುದೇ ರೀತಿಯ ಸಾಹಸಕ್ಕೆ ಮುಂದಾಗದೆ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ಮುನ್ನೆಚ್ಚರಿಕೆ, ಜಾಗೃತಿ ಮತ್ತು ಸಮಯೋಚಿತ ಕ್ರಮವೇ ಜೀವ ರಕ್ಷಿಸುವ ದೊಡ್ಡ ಅಸ್ತ್ರವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am