ಬ್ರೇಕಿಂಗ್ ನ್ಯೂಸ್
22-05-26 08:10 pm HK News Staffer ಕರಾವಳಿ
ಮಂಗಳೂರು, ಮೇ 22 : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನ ಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ.
ರಾ.ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು- ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯ ನಿರ್ವಹಿಸುತ್ತಿದೆ. ಈ ನೂತನ ಯೋಜನೆಯು ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು KIOCL ವಲಯದ ರಸ್ತೆ ಅಭಿವೃದ್ದಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಆರ್ಥಿಕ ನಾಡಿಮಿಡಿತವಾಗಿರುವ ಈ ರಸ್ತೆಯ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ಯೋಜನೆಗೆ ಕೈಜೋಡಿಸಿರುವ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm