ಬ್ರೇಕಿಂಗ್ ನ್ಯೂಸ್
22-05-26 08:10 pm HK News Staffer ಕರಾವಳಿ
ಮಂಗಳೂರು, ಮೇ 22 : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನ ಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ.
ರಾ.ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು- ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯ ನಿರ್ವಹಿಸುತ್ತಿದೆ. ಈ ನೂತನ ಯೋಜನೆಯು ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು KIOCL ವಲಯದ ರಸ್ತೆ ಅಭಿವೃದ್ದಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಆರ್ಥಿಕ ನಾಡಿಮಿಡಿತವಾಗಿರುವ ಈ ರಸ್ತೆಯ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ಯೋಜನೆಗೆ ಕೈಜೋಡಿಸಿರುವ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm