ಬ್ರೇಕಿಂಗ್ ನ್ಯೂಸ್
24-05-26 09:22 pm Mangaluru Staffer ಕರಾವಳಿ
ಮಂಗಳೂರು, ಮೇ 24: ಸುರತ್ಕಲ್ ಬಳಿಯ ಮುಕ್ಕದಲ್ಲಿ ಭೀಕರ ಅಪಘಾತ ನಡೆದಿದ್ದು ಲಾರಿ ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಾಗಲಕೋಟ ಮೂಲದ ಯುವಕನೊಬ್ಬ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮುಕ್ಕ ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಯತ್ನದಲ್ಲಿದ್ದಾಗ ಬೈಕ್ ಲಾರಿಯ ಬದಿಗೆ ತಾಗಿದ್ದು ಪಲ್ಟಿಯಾಗಿ ಬಿದ್ದಿದೆ. ಬೈಕಿನಲ್ಲಿ ಮೂವರು ಸವಾರರಿದ್ದು ಮಂಜುನಾಥ್ ಎನ್ನುವಾತ ಬೈಕ್ ಚಲಾಯಿಸುತ್ತಿದ್ದ. ಮಧ್ಯದಲ್ಲಿದ್ದ ಭೀಮ ಸಿದ್ದಪ್ಪ (20) ಎನ್ನುವಾತ ರಸ್ತೆಗೆ ಬಿದ್ದಿದ್ದು ಇನ್ನೊಂದು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ. ಸವಾರ ಮಂಜುನಾಥ್ ಮತ್ತು ಇನ್ನೊಬ್ಬ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರು ಯುವಕರು ಬಾಗಲಕೋಟ ಮೂಲದವರಾಗಿದ್ದು ಮುಲ್ಕಿಯಲ್ಲಿ ಕೆಲಸ ಮುಗಿಸಿ ಸುರತ್ಕಲ್ ಕಡೆಗೆ ತೆರಳುತ್ತಿದ್ದರು. ಸ್ಥಳದಲ್ಲಿದ್ದ ಎಎಸ್ಐ ಕೃಷ್ಣ ಅವರು ಅಪಘಾತದಲ್ಲಿ ಮೃತಪಟ್ಟ ಯುವಕನ ಶವವನ್ನು ಸ್ಥಳೀಯರೊಂದಿಗೆ ಸೇರಿ ಸ್ಟ್ರೆಚರ್ ನಲ್ಲಿ ಹಾಕಿ ಆಸ್ಪತ್ರೆಗೆ ಸಾಗಿಸಿದರು. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೈಕ್ ಸವಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm