ಬ್ರೇಕಿಂಗ್ ನ್ಯೂಸ್
25-05-26 01:08 pm HK News Staffer ಕರಾವಳಿ
ಮಂಗಳೂರು, ಮೇ 25: ಅಮೆರಿಕದಲ್ಲಿ ಚರ್ಚ್ ಧರ್ಮಗುರುವಾಗಿ ಹುಟ್ಟೂರು ಮಂಗಳೂರಿನ ಬಗ್ಗೆ ನಿಕಟ ಪ್ರೀತಿ ಇರಿಸಿಕೊಂಡಿದ್ದ, ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಫಾ. ಮೊನ್ಸಿಜೆರ್ ಲೆಸ್ಲಿ ಶೆಣಯ್ (79) ಭಾನುವಾರ ಮೇ 24ರಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.
ಮಂಗಳೂರಿನ ಉರ್ವಾ ಮೂಲದ ಶೆಣಯ್, 1976ರ ಮೇ 14ರಂದು ಧರ್ಮಗುರುಗಳಾಗಿ ದೀಕ್ಷೆ ಪಡೆದು, 1979ರಿಂದ ಅಮೆರಿಕದ ಫ್ರೆಸ್ನೋ ಧರ್ಮಪ್ರಾಂತ್ಯದಲ್ಲಿ ಸೇವೆ ಸಲ್ಲಿಸಿದ್ದರು. 1985ರಲ್ಲಿ ಅಮೆರಿಕದ ಪೌರತ್ವ ಪಡೆದಿದ್ದರೂ, ಹುಟ್ಟೂರಿನೊಂದಿಗೆ ನಿಕಟ ಸಂಪರ್ಕವನ್ನು ಉಳಿಸಿಕೊಂಡು, ಹಲವು ಮಾನವೀಯ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ಬೆಂಬಲ ನೀಡುತ್ತ ಬಂದಿದ್ದರು.
ಇವರ ಪ್ರಮುಖ ಕೊಡುಗೆಗಳಲ್ಲಿ “ಮೊ ಲೆಸ್ಲಿ ಎಫ್. ಶೆಣಯ್ ವಿದ್ಯಾರ್ಥಿವೇತನ” ಯೋಜನೆ ಪ್ರಮುಖವಾಗಿದ್ದು, ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಿದ್ದರು. ಅಲ್ಲದೆ, ಸೆಮಿನರಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಬಡ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ವಾಹನಗಳನ್ನು ದಾನ ಮಾಡಿದ್ದರು. 2025ರಲ್ಲಿ, ತಮ್ಮ ನಿವೃತ್ತಿ ಸಂಗ್ರಹದಿಂದ ಪುತ್ತೂರಿನಲ್ಲಿ ಹಿರಿಯ ನಾಗರಿಕರ ವಸತಿಗೃಹವನ್ನು ನಿರ್ಮಿಸಿ ದಾನವಾಗಿ ನೀಡಿದ್ದು, ವೃದ್ಧರಿಗೆ ಆಶ್ರಯ ಮತ್ತು ಆರೈಕೆ ಒದಗಿಸಿದ್ದರು. ಅವರ ಒಡನಾಟ ಇದ್ದವರು ಸರಳ, ಸ್ನೇಹಪರ ವ್ಯಕ್ತಿತ್ವ ಎಂದು ಸ್ಮರಿಸುತ್ತಿದ್ದಾರೆ.
ಮೃತರ ಸಾರ್ವಜನಿಕ ಅಂತಿಮ ದರ್ಶನವು ಮೇ 27ರ ಬುಧವಾರ ಮಧ್ಯಾಹ್ನ 2.30ರಿಂದ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಉರ್ವಾ ಇಮ್ಯಾಕ್ಯುಲೇಟ್ ಕನ್ಸೆಪ್ಷನ್ ಚರ್ಚ್ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಪ್ರಮುಖ ಗಣ್ಯರು ಅಗಲಿದ ಧರ್ಮಗುರುಗಳಿಗೆ ಶೋಕ ವ್ಯಕ್ತ ಪಡಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm