ಬ್ರೇಕಿಂಗ್ ನ್ಯೂಸ್
25-05-26 09:57 pm HK News Staffer ಕರಾವಳಿ
ಮಂಗಳೂರು, ಮೇ 25: ಎಮ್ ಆರ್ ಪಿ ಎಲ್ ನ ಉದ್ದೇಶಿತ ಹಸಿರು ವಲಯಕ್ಕಾಗಿ ಗುರುತಿಸಿರುವ 27 ಎಕರೆ ಜಮೀನು ಸ್ವಾಧೀನ ತಕ್ಷಣ ಆರಂಭಿಸಬೇಕು, ಪುನರ್ವಸತಿ ವಾಗ್ದಾನವನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮದ ಕೋಕ್ ಸಲ್ಫರ್ ಘಟಕದ ಮಾಲಿನ್ಯದಿಂದ ಸಂತ್ರಸ್ತರು "ನಾಗರಿಕ ಹೋರಾಟ ಸಮಿತಿ" ನೇತೃತ್ವದಲ್ಲಿ ಎಂಟು ದಿನಗಳಿಂದ ನಡೆಸುತ್ತಿದ್ದ ಹಗಲು ರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಭರವಸೆಯೊಂದಿಗೆ ಮುಕ್ತಾಯಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಅಧ್ಯಕ್ಷತೆಯ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಎಂಆರ್ ಪಿಎಲ್ ಎಂಡಿ ಕಾಮತ್ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಸಹಿತ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಹಸಿರು ವಲಯಕ್ಕೆ ಗುರುತು ಮಾಡಲಾದ 27 ಎಕರೆ ಜಮೀನನ್ನು ಕಂಪೆನಿ ನೇರ ಖರೀದಿಸುವುದು, ಜಿಲ್ಲಾಧಿಕಾರಿ ಅಧೀನದ ಸಮಿತಿಯಿಂದ ಭೂಸ್ವಾಧೀನಗೊಳಿಸುವುದು, ಕೆಐಡಿಬಿಯಿಂದ ಸ್ವಾಧೀನ ಮಾಡುವುದು ಈ ಮೂರು ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳು ಸಭೆಯ ಮುಂದೆ ತೆರದಿಟ್ಟರು. ಈ ಅಂಶಗಳ ಮೇಲೆ ಹೋರಾಟ ಸಮಿತಿಯ ಪ್ರತಿನಿಧಿಗಳು, ಜನಪ್ರತಿನಿಧಿಗಳು ಚರ್ಚಿಸಿದರು. ಕೆಐಎಡಿಬಿಯಿಂದ ಭೂಸ್ವಾಧೀನದ ಕಾನೂನು ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವುದಾಗಿ ಜಿಲ್ಲಾಡಳಿತ ಸ್ಪಷ್ಟ ಭರವಸೆ ನೀಡಿದ ಹಿನ್ನಲೆಯಲ್ಲಿ ಹೋರಾಟ ಸಮಿತಿ ಪ್ರತಿನಿಧಿಗಳು ಕೆಐಎಡಿಬಿ ಮೂಲಕ ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದರು. ಭೂಸ್ವಾಧೀನ ಆರಂಭಿಸುವುದು ಯಾವುದೇ ಕಾರಣಕ್ಕೂ ಆರು ತಿಂಗಳು ಮೀರಬಾರದು ಎಂದು ಖಾತರಿ ಪಡಿಸಬೇಕು ಎಂದು ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು. ಜಿಲ್ಲಾಡಳಿತ, ಕೆಐಎಡಿಬಿ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದರು.
ನೇರ ಖರೀದಿಯೊಂದಿಗೆ ಏಕಗಂಟಿನ ಪರಿಹಾರಕ್ಕೆ ಸಂತ್ರಸ್ತರು ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಎಂಆರ್ ಪಿಎಲ್ ನ ನಾಲ್ಕನೇ ಹಂತದ ಭೂಸ್ವಾಧೀನಕ್ಕೆ ಪೆರ್ಮುದೆ ಗ್ರಾಮಸ್ಥರಿಗೆ ಸಿಗುವ ಪುನರ್ವಸತಿ ಪ್ಯಾಕೇಜ್ ನಲ್ಲಿರುವ ಎಲ್ಲಾ ಅಂಶಗಳನ್ನು ಜೋಕಟ್ಟೆ ಸಂತ್ರಸ್ತರಿಗೂ ಒದಗಿಸಬೇಕು ಎಂದು ಮುನೀರ್ ಕಾಟಿಪಳ್ಳ ಇದೇ ವೇಳೆ ಆಗ್ರಹಿಸಿದರು. ನಾಲ್ಕನೇ ಹಂತದ ಭೂಸ್ವಾಧೀನ ಪ್ಯಾಕೇಜ್ ನಲ್ಲಿ ಇರುವ 18 ತಿಂಗಳ ಮನೆ ಬಾಡಿಗೆಯನ್ನು ಜೋಕಟ್ಟೆಯವರಿಗೆ ಒದಗಿಸಬೇಕು, ಕುಸಿಯವ ಹಂತದಲ್ಲಿ ಇರುವ ಮನೆಗಳ ನಿವಾಸಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm