ಬ್ರೇಕಿಂಗ್ ನ್ಯೂಸ್
01-06-26 02:22 pm HK News Staffer ಕರಾವಳಿ
ಮಂಗಳೂರು, ಜೂ 01: ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಜೂನ್ 3ರಂದು ನಡೆಸಲು ನಿಗದಿಯಾಗಿದ್ದರೂ, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಅದನ್ನು ರದ್ದುಗೊಳಿಸಿದೆ. ಈ ನಿರ್ಧಾರದಿಂದ ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ನಡುವಿನ ವೇಗದ ರೈಲು ಸೇವೆಯ ನಿರೀಕ್ಷೆಗೆ ಮತ್ತೊಮ್ಮೆ ತಾತ್ಕಾಲಿಕ ವಿಳಂಬ ಉಂಟಾಗಿದೆ.
ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ ಕಚೇರಿಯಿಂದ ಅಧಿಕೃತ ಆದೇಶ ಹೊರಬಂದಿದ್ದು, ಯಶವಂತಪುರ- ಮಂಗಳೂರು- ಯಶವಂತಪುರ ಮಾರ್ಗದಲ್ಲಿ ನಡೆಯಬೇಕಿದ್ದ ಟ್ರಯಲ್ ರನ್ ಸೇರಿದಂತೆ ಎಲ್ಲಾ ಕಾರ್ಯಾಚರಣೆಗಳನ್ನು ಹಿಂತೆಗೆದುಕೊಳ್ಳಲಾಗಿದೆ. ಜೊತೆಗೆ ನಿಗದಿಯಾಗಿದ್ದ ನಿಲ್ದಾಣ ವ್ಯವಸ್ಥೆಗಳು ಮತ್ತು ತಾಂತ್ರಿಕ ಸಿದ್ಧತೆಗಳನ್ನೂ ರದ್ದುಪಡಿಸಲಾಗಿದೆ.
ಈ ಹಿಂದೆ 8 ಬೋಗಿಗಳ ವಂದೇ ಭಾರತ್ ರೈಲು ಮೂಲಕ ಶಿರಾಡಿ ಘಾಟ್ ಮಾರ್ಗದಲ್ಲಿ ವೇಗ, ಸುರಂಗಗಳು, ಸೇತುವೆಗಳು ಹಾಗೂ ತೀಕ್ಷ್ಣ ತಿರುವುಗಳ ತಾಂತ್ರಿಕ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಮಹತ್ವದ ಯೋಜನೆ ರೂಪಿಸಲಾಗಿತ್ತು. ಈ ಪ್ರಯೋಗವು ವಿಶೇಷವಾಗಿ ಘಾಟ್ ವಿಭಾಗದ ಸುರಕ್ಷತೆ ಮತ್ತು ಕಾರ್ಯಾಚರಣಾ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿತ್ತು. ಆದರೆ ಇದೀಗ ಟ್ರಯಲ್ ರನ್ ಅನಿರೀಕ್ಷಿತವಾಗಿ ಮುಂದೂಡಲ್ಪಟ್ಟಿದೆ. ರೈಲ್ವೆ ಇಲಾಖೆ ಈ ನಿರ್ಧಾರದ ನಿಖರ ಕಾರಣವನ್ನು ಅಧಿಕೃತವಾಗಿ ಬಹಿರಂಗಪಡಿಸದಿದ್ದರೂ, ಮೂಲಗಳ ಪ್ರಕಾರ ಕಾರ್ಯಾಚರಣಾ ಆದ್ಯತೆಗಳು ಹಾಗೂ ತಾಂತ್ರಿಕ ಸಿದ್ಧತೆಗಳ ಪೂರ್ಣತೆ ಕೊರತೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಶಿರಾಡಿ ಘಾಟ್ ಮಾರ್ಗದಲ್ಲಿ ಈಗಾಗಲೇ ಸರಕು ರೈಲುಗಳ ಸಂಚಾರ ನಿರಂತರವಾಗಿದ್ದು, ಹಳಿ ಮತ್ತು ಮೂಲಸೌಕರ್ಯದಲ್ಲಿ ಯಾವುದೇ ಪ್ರಮುಖ ಅಡಚಣೆಗಳಿಲ್ಲದಿದ್ದರೂ, ವಂದೇ ಭಾರತ್ಗಾಗಿ ಅಗತ್ಯವಿರುವ ವಿಶೇಷ ತಾಂತ್ರಿಕ ಸಿದ್ಧತೆಗಳು ಪೂರ್ಣಗೊಂಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು–ಮಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆ ಕರಾವಳಿ ಭಾಗದ ಜನರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ ಮತ್ತು ದೈನಂದಿನ ಸಂಪರ್ಕಕ್ಕೆ ಹೊಸ ವೇಗ ನೀಡಲಿದೆ ಎಂಬ ನಿರೀಕ್ಷೆ ಇದೆ.
ಪ್ರಸ್ತುತ ಟ್ರಯಲ್ ರನ್ಗೆ ಹೊಸ ದಿನಾಂಕವನ್ನು ರೈಲ್ವೆ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಮುಂದಿನ ಹಂತದ ಅಧಿಕೃತ ವೇಳಾಪಟ್ಟಿ ಮತ್ತು ಪರಿಷ್ಕೃತ ಯೋಜನೆ ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ.
01-06-26 11:31 am
HK News Staffer
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 02:22 pm
HK News Staffer
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
01-06-26 12:40 pm
HK News Staffer
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm