ಬ್ರೇಕಿಂಗ್ ನ್ಯೂಸ್
02-06-26 01:18 pm HK News Staffer ಕರಾವಳಿ
ಮಂಗಳೂರು, ಜೂನ್ 2 : ಮುಂದಿನ ವರ್ಷ ನವರಾತ್ರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬರಬೇಕು, ಬರಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಳೆದ ನವರಾತ್ರಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಈಗ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದ್ದು, ಮಿಥುನ್ ರೈ ಮಾತು ನಿಜವಾಯ್ತು ಎನ್ನುವ ಮಾತು ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ.
2025ರ ಅಕ್ಟೋಬರ್ ನಲ್ಲಿ ನಡೆದ ಮಿಥುನ್ ರೈ ನೇತೃತ್ವದ 10ನೇ ವರ್ಷದ ಪಿಲಿ ನಲಿಕೆ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಈ ವೇಳೆ, ಮಿಥುನ್ ರೈ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಬಾರಿ ಡಿಸಿಎಂ ಆಗಿ ಬಂದಿದ್ದಾರೆ. ಮುಂದಿನ ಬಾರಿಯ ಪಿಲಿ ನಲಿಕೆ ಕಾರ್ಯಕ್ರಮಕ್ಕೆ ಖಂಡಿತವಾಗಿಯೂ ಮುಖ್ಯಮಂತ್ರಿ ಆಗಿ ಬರಲಿದ್ದಾರೆ. ಆ ರೀತಿಯ ಆಶೀರ್ವಾದವನ್ನು ದೇವಿ ಅನುಗ್ರಹಿಸಲಿದ್ದಾರೆ ಎಂದು ಹೇಳಿದ್ದರು. ಬಹಿರಂಗ ಸಭೆಯಲ್ಲಿ ನೀಡಿದ್ದ ಹೇಳಿಕೆಗೆ ಭಾರೀ ಕರತಾಡನವೂ ಬಂದಿತ್ತು.





ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಇತರೇ ಕಾಂಗ್ರೆಸ್ ನಾಯಕರು ಕೂಡ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಹಾಗೂ ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ಪ್ರಶಂಸಿಸಿ, ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಮಿಥುನ್ ರೈ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಒತ್ತಾಯ ಮಾಡುತ್ತಾ, “ಬೆಂಗಳೂರಿನಂತೆ ವೇಗದಲ್ಲಿ ಮಂಗಳೂರು ಕೂಡ ಬೆಳೆಯಬೇಕು. ಅದಕ್ಕಾಗಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು” ಎಂದು ಹೇಳಿದ್ದರು. ಸ್ಥಳೀಯ ಹುಲಿ ವೇಷಧಾರಿ ಕಲಾವಿದರ ಅಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಕುರಿತಾಗಿಯೂ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ತಾವು ಯಾವುದೇ ಪೂರ್ವ ನಿಯೋಜಿತ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದೂ, ಜನರ ಪ್ರೀತಿ ಹಾಗೂ ಆತ್ಮೀಯತೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದೂ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆ ದೇಶದ ಪ್ರಮುಖ ಸಾಂಸ್ಕೃತಿಕ ಮತ್ತು ಶಕ್ತಿಶಾಲಿ ಪ್ರದೇಶಗಳಲ್ಲಿ ಒಂದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು. ವಿಶೇಷ ಅಂದರೆ, ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ಮಿಥುನ್ ರೈ ನೇತೃತ್ವದಲ್ಲಿ ಡಿಕೆಶಿಗೆ ನೀಡಲಾಗಿದ್ದ ಗೌರವ ಫಲಕದಲ್ಲೂ “2026ರ ಸಿಎಂ ಡಿಕೆ ಶಿವಕುಮಾರ್” ಎಂದು ಉಲ್ಲೇಖಿಸಲಾಗಿತ್ತು.
#DKShivakumar will return next year as #CM” — #MithunRai statement at the 2025 #Pilinalike event in #Mangaluru is going viral again. With recent political developments, social media users are calling it a prediction that may have come true. #DKShivakumar #KarnatakaPolitics pic.twitter.com/QKCUxoBuuv
— Headline Karnataka (@hknewsonline) June 2, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am