ಬ್ರೇಕಿಂಗ್ ನ್ಯೂಸ್
06-01-21 04:09 pm Mangalore Correspondent ಕರಾವಳಿ
ಮಂಗಳೂರು, ಜ. 6: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮಂದಿಯನ್ನು ಕರೆದು ಪರೇಡ್ ನಡೆಸುವ ಮೂಲಕ ನೂತನ ಪೊಲೀಸ್ ಆಯುಕ್ತ ಎಂ. ಶಶಿ ಕುಮಾರ್ ಖಡಕ್ ವಾರ್ನ್ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಮಿಷನರೇಟ್ ವ್ಯಾಪ್ತಿಯ ಆರೋಪಿಗಳ ಪರೇಡ್ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದು ವಿಚಾರಿಸುವುದು, ಇದರಿಂದ ಮನೆಯವರು ಕೋರ್ಟ್ ಕಚೇರಿ ಅಲೆದಾಡುವ ಸ್ಥಿತಿಗೆ ಅವಕಾಶ ನೀಡಬಾರದು. ವ್ಯಸನ ಮುಂದುವರಿಸಿದರೆ ಕಾನೂನಿನಲ್ಲಿ ಇರುವ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಾಜದಲ್ಲಿ ತಮ್ಮ ಸುತ್ತಮುತ್ತ ಇಂತಹ ದುಶ್ಚಟಗಳ ಬಗ್ಗೆ ಮಾಹಿತಿ ಇದ್ದಲ್ಲಿ, 112ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಅಧಿಕಾರಿಗಳು ಕೂಡ ತಮ್ಮ ಠಾಣೆ ವ್ಯಾಪ್ತಿಯಲ್ಲಿ ಈ ನಿಟ್ಟಿನಲ್ಲಿ ನಿಗಾ ವಹಿಸಿ ವ್ಯಾಪ್ತಿಯನ್ನು ಡ್ರಗ್ಸ್ ಮುಕ್ತವಾಗಿಸಲು ಪ್ರಯತ್ನಿಸಬೇಕು ಎಂದು ಆಯುಕ್ತರು ಹೇಳಿದರು.
ಡ್ರಗ್ಸ್ ಸೇವನೆ ಹಾಗೂ ಅಡ್ಡಾಗಳ ಮೇಲೆ ಅಧಿಕಾರಿಗಳು ನಿಗಾ ಇರಿಸಬೇಕು. ವ್ಯಸನಿಗಳು ಪತ್ತೆಯಾದಾಗ ಅವರ ಕುಟುಂಬದವನ್ನು ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ಸು ನಿಲ್ದಾಣ, ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊತ್ತು ಕುಡಿಯುವುದು, ಸಾರ್ವಜನಿಕರಿಗೆ ತೊಂದರೆ ಕೊಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ನಿನ್ನೆ ರಾತ್ರಿ ಮತ್ತೆ ಮದ್ಯಪಾನ ನಿರತರಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ತಮ್ಮ ಕೆಟ್ಟ ಹವ್ಯಾಸವನ್ನು ಬಿಟ್ಟು ಉತ್ತಮವಾಗಿ ಬದುಕಲು, ಉದ್ಯೋಗಕ್ಕೆ ಮುಂದಾಗುವುದಿದ್ದಲ್ಲಿ ನಮಗೆ ತಿಳಿಸಿದರೆ ಕ್ರಮ ವಹಿಸಲಾಗುವುದು ಎಂದು ಮಿಷನರ್ ಶಶಿಕುಮಾರ್ ತಿಳಿಸಿದರು.
ಈ ಸಂಧರ್ಭ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೇಡ್ ಜತೆ ಮಾರ್ಚ್ ಫಾಸ್ಟ್...!
ಪರೇಡ್ ಬಳಿಕ ಮೈದಾನದಲ್ಲಿ ಠಾಣಾ ವ್ಯಾಪ್ತಿಯ ಆರೋಪಿಗಳನ್ನು ಮೈದಾನಕ್ಕೆ ಸುಮಾರು 3 ಸುತ್ತುಗಳ ಮಾರ್ಚ್ ಫಾಸ್ಟನ್ನು ಪೊಲೀಸ್ ಆಯುಕ್ತ ಶಶಿಕುಮಾರ್ ನಡೆಸಿದರು.
Video:
Police commissioner N Shashi Kumar on Wednesday January 6 issued stringent warning to offenders of Narcotic Drugs and Psychotropic Substances Act (NDPS) and asked them to refrain from illegal activities.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm