ಬ್ರೇಕಿಂಗ್ ನ್ಯೂಸ್
06-01-21 04:09 pm Mangalore Correspondent ಕರಾವಳಿ
ಮಂಗಳೂರು, ಜ. 6: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮಂದಿಯನ್ನು ಕರೆದು ಪರೇಡ್ ನಡೆಸುವ ಮೂಲಕ ನೂತನ ಪೊಲೀಸ್ ಆಯುಕ್ತ ಎಂ. ಶಶಿ ಕುಮಾರ್ ಖಡಕ್ ವಾರ್ನ್ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಮಿಷನರೇಟ್ ವ್ಯಾಪ್ತಿಯ ಆರೋಪಿಗಳ ಪರೇಡ್ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದು ವಿಚಾರಿಸುವುದು, ಇದರಿಂದ ಮನೆಯವರು ಕೋರ್ಟ್ ಕಚೇರಿ ಅಲೆದಾಡುವ ಸ್ಥಿತಿಗೆ ಅವಕಾಶ ನೀಡಬಾರದು. ವ್ಯಸನ ಮುಂದುವರಿಸಿದರೆ ಕಾನೂನಿನಲ್ಲಿ ಇರುವ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ತಮ್ಮ ಸುತ್ತಮುತ್ತ ಇಂತಹ ದುಶ್ಚಟಗಳ ಬಗ್ಗೆ ಮಾಹಿತಿ ಇದ್ದಲ್ಲಿ, 112ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಅಧಿಕಾರಿಗಳು ಕೂಡ ತಮ್ಮ ಠಾಣೆ ವ್ಯಾಪ್ತಿಯಲ್ಲಿ ಈ ನಿಟ್ಟಿನಲ್ಲಿ ನಿಗಾ ವಹಿಸಿ ವ್ಯಾಪ್ತಿಯನ್ನು ಡ್ರಗ್ಸ್ ಮುಕ್ತವಾಗಿಸಲು ಪ್ರಯತ್ನಿಸಬೇಕು ಎಂದು ಆಯುಕ್ತರು ಹೇಳಿದರು.


ಡ್ರಗ್ಸ್ ಸೇವನೆ ಹಾಗೂ ಅಡ್ಡಾಗಳ ಮೇಲೆ ಅಧಿಕಾರಿಗಳು ನಿಗಾ ಇರಿಸಬೇಕು. ವ್ಯಸನಿಗಳು ಪತ್ತೆಯಾದಾಗ ಅವರ ಕುಟುಂಬದವನ್ನು ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ಸು ನಿಲ್ದಾಣ, ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊತ್ತು ಕುಡಿಯುವುದು, ಸಾರ್ವಜನಿಕರಿಗೆ ತೊಂದರೆ ಕೊಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ನಿನ್ನೆ ರಾತ್ರಿ ಮತ್ತೆ ಮದ್ಯಪಾನ ನಿರತರಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ತಮ್ಮ ಕೆಟ್ಟ ಹವ್ಯಾಸವನ್ನು ಬಿಟ್ಟು ಉತ್ತಮವಾಗಿ ಬದುಕಲು, ಉದ್ಯೋಗಕ್ಕೆ ಮುಂದಾಗುವುದಿದ್ದಲ್ಲಿ ನಮಗೆ ತಿಳಿಸಿದರೆ ಕ್ರಮ ವಹಿಸಲಾಗುವುದು ಎಂದು ಮಿಷನರ್ ಶಶಿಕುಮಾರ್ ತಿಳಿಸಿದರು.


ಈ ಸಂಧರ್ಭ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೇಡ್ ಜತೆ ಮಾರ್ಚ್ ಫಾಸ್ಟ್...!
ಪರೇಡ್ ಬಳಿಕ ಮೈದಾನದಲ್ಲಿ ಠಾಣಾ ವ್ಯಾಪ್ತಿಯ ಆರೋಪಿಗಳನ್ನು ಮೈದಾನಕ್ಕೆ ಸುಮಾರು 3 ಸುತ್ತುಗಳ ಮಾರ್ಚ್ ಫಾಸ್ಟನ್ನು ಪೊಲೀಸ್ ಆಯುಕ್ತ ಶಶಿಕುಮಾರ್ ನಡೆಸಿದರು.
Video:
Police commissioner N Shashi Kumar on Wednesday January 6 issued stringent warning to offenders of Narcotic Drugs and Psychotropic Substances Act (NDPS) and asked them to refrain from illegal activities.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm