ಬ್ರೇಕಿಂಗ್ ನ್ಯೂಸ್
10-06-26 10:03 pm HK News Staffer ಕರಾವಳಿ
ಮಂಗಳೂರು, ಜೂನ್ 10: ಸಾರ್ವಜನಿಕ ರಸ್ತೆ, ವೃತ್ತಗಳು ಹಾಗೂ ಡಿವೈಡರ್ಗಳ ಮೇಲೆ ಅಕ್ರಮವಾಗಿ ಅಳವಡಿಸಲಾಗುತ್ತಿರುವ ಫ್ಲೆಕ್ಸ್, ಬ್ಯಾನರ್ ಮತ್ತು ಜಾಹೀರಾತು ಫಲಕಗಳನ್ನು ತಕ್ಷಣ ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ಆದೇಶದಂತೆ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಅನಧಿಕೃತ ಫ್ಲೆಕ್ಸ್ ಅಳವಡಿಕೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಹಾಗೂ ರಸ್ತೆ ಸುರಕ್ಷತೆಗೆ ಅಪಾಯವಾಗುವ ರೀತಿಯಲ್ಲಿ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಆದೇಶದಲ್ಲಿ ಕರ್ನಾಟಕ ಓಪನ್ ಪ್ಲೇಸಸ್ (ಪ್ರಿವೆನ್ಷನ್ ಆಫ್ ಡಿಸ್ಫಿಗರ್ಮೆಂಟ್) ಕಾಯ್ದೆ 1981 ಹಾಗೂ ಕರ್ನಾಟಕ ಮುನ್ಸಿಪಾಲಿಟೀಸ್ ಕಾಯ್ದೆಯ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಸರ್ಕಾರದ ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಪೋಸ್ಟರ್, ಕಟೌಟ್, ಫ್ಲೆಕ್ಸ್ ಅಳವಡಿಸುವುದು ಕಾನೂನುಬಾಹಿರ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಅಕ್ರಮ ಫ್ಲೆಕ್ಸ್ಗಳಿಂದ ವಾಹನ ಸವಾರರಿಗೆ, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ “ಜೀರೋ ಟಾಲರೆನ್ಸ್” ನೀತಿ ಅನುಸರಿಸುತ್ತಿದೆ. ಈಗಾಗಲೇ ರಸ್ತೆ ಡಿವೈಡರ್ಗಳ ಮೇಲೆ ಅಳವಡಿಸಲಾದ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಂಯುಕ್ತವಾಗಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳಲಿವೆ. ಸಾರ್ವಜನಿಕ ಸ್ಥಳಗಳ ಸೌಂದರ್ಯ ಕಾಪಾಡುವುದು ಹಾಗೂ ರಸ್ತೆ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm