ಬ್ರೇಕಿಂಗ್ ನ್ಯೂಸ್
12-06-26 04:31 pm HK News Staffer ಕರಾವಳಿ
ಉಡುಪಿ, ಜೂನ್ 12: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ, ಒಂದು ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ದೇವಿಗೆ ಅರ್ಪಿಸಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸಿದ ವಿಜಯ್ ಶರ್ಟ್, ಬನಿಯಾನ್ ಕಳಚಿ ಕೇವಲ ಲುಂಗಿ ಮತ್ತು ಶಲ್ಯವನ್ನು ಮೈಗೆ ಸುತ್ತಿಕೊಂಡು ದೇವರ ದರ್ಶನ ಮಾಡಿದ್ದಾರೆ. ದೇವರಿಗೆ ಸಂಕಲ್ಪ ಪೂಜೆ ಮಾಡಿ ಕೇವಲ 20 ನಿಮಿಷ ಮಾತ್ರ ದೇವಸ್ಥಾನದಲ್ಲಿ ಕಳೆದಿದ್ದಾರೆ.

ದೇವರ ದರ್ಶನ ಸಂದರ್ಭದಲ್ಲಿ ವಿಜಯ್ ಅವರು 1 ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ಅರ್ಪಿಸಿದ್ದಾರೆಂದು ಕೊಲ್ಲೂರು ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕೊಲ್ಲೂರು ದೇಗುಲ ದೇಶದ ಪ್ರಖ್ಯಾತ ಶಕ್ತಿಪೀಠಗಳಲ್ಲಿ ಒಂದಾಗಿದ್ದು ತಮಿಳುನಾಡು ಮತ್ತು ಕೇರಳದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಹಿಂದೆ ತಮಿಳುನಾಡು ಸಿಎಂ ಆಗಿದ್ದ ಎಂಜಿಆರ್, ಜಯಲಲಿತಾ ಕೂಡ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ಎಂಜಿಆರ್ ಅವರು ಒಂದು ಕೇಜಿಯ ಚಿನ್ನದ ಖಡ್ಗವನ್ನು ದೇವಿಗೆ ಅರ್ಪಿಸಿದ್ದರು.
ಈ ಬಾರಿ ಜೋಸೆಫ್ ವಿಜಯ್ ಸಿಎಂ ಹುದ್ದೆಗೇರಿ ಒಂದು ತಿಂಗಳು ಭರ್ತಿ ಆಗುತ್ತಲೇ ದಿಢೀರ್ ಆಗಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ. ವಿಜಯ್ ಹೆತ್ತವರು ಚುನಾವಣೆಗೂ ಮುನ್ನ ಹರಕೆ ಹೊತ್ತಿದ್ದು ಪ್ರಾರ್ಥನೆ ಫಲಿಸಿದ ಹಿನ್ನೆಲೆಯಲ್ಲಿ ವಿಜಯ್ ಈಗ ದೇಗುಲಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 06:54 pm
HK News Staffer
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm
ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಭೂಮಿ ಕಬಳಿಕ...
04-07-26 11:38 am
ಚಿನ್ನದ ಉದ್ಯಮಿಗೆ ಹಲ್ಲೆಗೈದು ದರೋಡೆ ಪ್ರಕರಣ ; ಕೇರಳ...
03-07-26 07:45 pm