ಬ್ರೇಕಿಂಗ್ ನ್ಯೂಸ್
12-06-26 10:48 pm HK News Desk ಕರಾವಳಿ
ಬಂಟ್ವಾಳ, ಜೂನ್ 12: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಎದೆನೋವಿನಿಂದ ಅಸ್ವಸ್ಥರಾದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಸಿಪಿಆರ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸಿದ ಅಪರೂಪದ ಪ್ರಸಂಗ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಗರ ಠಾಣೆಯ ಸಿಪಿಸಿ ವಿನೋದ್ ನಾಯ್ಕ್ ಮತ್ತು ಹೋಮ್ ಗಾರ್ಡ್ ಜಯಗಣೇಶ್ ಜೂನ್ 11ರ ಮಧ್ಯರಾತ್ರಿ ಬಿಸಿ ರೋಡ್ ಬಳಿಯ ಗೂಡಿನಬಳಿ, ನಂದಾವರ ಭಾಗದಲ್ಲಿ ಕರ್ತವ್ಯದಲ್ಲಿದ್ದರು. ಮಧ್ಯರಾತ್ರಿ ಕರ್ತವ್ಯ ನಿರತರಾಗಿದ್ದ ವೇಳೆ ಮನೆಯೊಂದರಲ್ಲಿ ಎದೆನೋವಿನಿಂದ ವ್ಯಕ್ತಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಏನು ಮಾಡುವುದೆಂದು ತೋಚದೆ ಮನೆಯವರು ಬೊಬ್ಬೆ ಹಾಕತೊಡಗಿದ್ದರು.

ವಿಷಯ ತಿಳಿದು ಮನೆಯ ಒಳಕ್ಕೆ ತೆರಳಿದ ಇಬ್ಬರು ಪೊಲೀಸರು ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಉಪಚರಿಸಿ, ತತ್ಕಾಲಕ್ಕೆ ಉಸಿರಿನ ಸಮಸ್ಯೆ ಆಗದಂತೆ ನೋಡಿಕೊಂಡು ತುರ್ತು ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 50 ವರ್ಷದ ವ್ಯಕ್ತಿಗೆ ಹೃದಯಾಘಾತ ಆದರೂ ತುರ್ತು ಚಿಕಿತ್ಸೆ ಕೊಡಿಸಿದ್ದರಿಂದ ಅವರ ಪ್ರಾಣ ಉಳಿದಿದೆ. ಪೊಲೀಸ್ ಸಿಬಂದಿಯ ಸಕಾಲಿಕ ಕೆಲಸಕ್ಕೆ ಸಾರ್ವಜನಿಕರ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm