ಬ್ರೇಕಿಂಗ್ ನ್ಯೂಸ್
12-06-26 10:48 pm HK News Desk ಕರಾವಳಿ
ಬಂಟ್ವಾಳ, ಜೂನ್ 12: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಎದೆನೋವಿನಿಂದ ಅಸ್ವಸ್ಥರಾದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಸಿಪಿಆರ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸಿದ ಅಪರೂಪದ ಪ್ರಸಂಗ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಗರ ಠಾಣೆಯ ಸಿಪಿಸಿ ವಿನೋದ್ ನಾಯ್ಕ್ ಮತ್ತು ಹೋಮ್ ಗಾರ್ಡ್ ಜಯಗಣೇಶ್ ಜೂನ್ 11ರ ಮಧ್ಯರಾತ್ರಿ ಬಿಸಿ ರೋಡ್ ಬಳಿಯ ಗೂಡಿನಬಳಿ, ನಂದಾವರ ಭಾಗದಲ್ಲಿ ಕರ್ತವ್ಯದಲ್ಲಿದ್ದರು. ಮಧ್ಯರಾತ್ರಿ ಕರ್ತವ್ಯ ನಿರತರಾಗಿದ್ದ ವೇಳೆ ಮನೆಯೊಂದರಲ್ಲಿ ಎದೆನೋವಿನಿಂದ ವ್ಯಕ್ತಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಏನು ಮಾಡುವುದೆಂದು ತೋಚದೆ ಮನೆಯವರು ಬೊಬ್ಬೆ ಹಾಕತೊಡಗಿದ್ದರು.

ವಿಷಯ ತಿಳಿದು ಮನೆಯ ಒಳಕ್ಕೆ ತೆರಳಿದ ಇಬ್ಬರು ಪೊಲೀಸರು ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಉಪಚರಿಸಿ, ತತ್ಕಾಲಕ್ಕೆ ಉಸಿರಿನ ಸಮಸ್ಯೆ ಆಗದಂತೆ ನೋಡಿಕೊಂಡು ತುರ್ತು ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 50 ವರ್ಷದ ವ್ಯಕ್ತಿಗೆ ಹೃದಯಾಘಾತ ಆದರೂ ತುರ್ತು ಚಿಕಿತ್ಸೆ ಕೊಡಿಸಿದ್ದರಿಂದ ಅವರ ಪ್ರಾಣ ಉಳಿದಿದೆ. ಪೊಲೀಸ್ ಸಿಬಂದಿಯ ಸಕಾಲಿಕ ಕೆಲಸಕ್ಕೆ ಸಾರ್ವಜನಿಕರ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm