ಬ್ರೇಕಿಂಗ್ ನ್ಯೂಸ್
15-06-26 04:52 pm HK News Staffer ಕರಾವಳಿ
ಬೆಂಗಳೂರು, ಜೂನ್ 15: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನ್ನ ಮೇಲೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಅವರು ವಿಶೇಷ ತನಿಖಾ ತಂಡ (SIT)ಕ್ಕೆ ಅಧಿಕೃತ ದೂರು ಸಲ್ಲಿಸಿದ್ದಾರೆ.
ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಪತ್ನಿಯೊಂದಿಗೆ ಆಗಮಿಸಿದ ಚಿನ್ನಯ್ಯ, ಪ್ರಕರಣದ ತನಿಖಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಚಿನ್ನಯ್ಯ ಸಲ್ಲಿಸಿರುವ ದೂರಿನ ಪ್ರಕಾರ, ಧರ್ಮಸ್ಥಳ ಪ್ರಕರಣದ ಕುರಿತು ಹೈಕೋರ್ಟ್ನಲ್ಲಿ ತಾನು ಸಲ್ಲಿಸಿರುವ ರಿಟ್ ಅರ್ಜಿಯ ಹಿಂದೆ ಯಾರು ಇದ್ದಾರೆ?, ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ?, ಈ ಕೆಲಸವನ್ನು ಯಾರ ಪ್ರೇರಣೆಯಿಂದ ಮಾಡುತ್ತಿದ್ದೀರಿ? ಎಂಬ ಪ್ರಶ್ನೆಗಳನ್ನು ಪದೇ ಪದೇ ಕೇಳಿ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಇದಲ್ಲದೆ, ತನ್ನ ಮೊಬೈಲ್ ಸಂಖ್ಯೆ ಪಡೆದು ನೇರವಾಗಿ ಮಾತನಾಡಲು ಒತ್ತಾಯ ಮಾಡಲಾಗಿದೆ. ತನ್ನ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಲಾಗಿದೆ. ಈ ಎಲ್ಲ ಬೆಳವಣಿಗೆಗಳು ಪರೋಕ್ಷ ಬೆದರಿಕೆ ಹಾಗೂ ಮಾನಸಿಕ ಕಿರುಕುಳದ ಸ್ವರೂಪದಲ್ಲಿವೆ ಎಂದು ಚಿನ್ನಯ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಕರ್ನಾಟಕ ಹೈಕೋರ್ಟ್ನಲ್ಲಿ W.P. No. 17331/2026 ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದ ತನಿಖೆಯ ಪ್ರಗತಿ ಹಾಗೂ ಪ್ರಸ್ತುತ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದೆ.
ಹೈಕೋರ್ಟ್ ಆದೇಶ ಹೊರಬಿದ್ದ ಬಳಿಕ ಪ್ರಕರಣದ ಇತರ ಆರೋಪಿಗಳು ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಮುಂದಾಗಿದ್ದಾರೆ. ದೂರವಾಣಿ ಕರೆಗಳ ಮೂಲಕ ಬೆದರಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಚಿನ್ನಯ್ಯ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನೆಲ್ನ ಅಭಿಷೇಕ್ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ಮತ್ತು ತನ್ನ ಕುಟುಂಬ ಸದಸ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಚಿನ್ನಯ್ಯ ಎಸ್ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಚಿನ್ನಯ್ಯ ಅವರ ದೂರಿನೊಂದಿಗೆ ಧರ್ಮಸ್ಥಳ ಪ್ರಕರಣದ ತನಿಖೆಗೆ ಮತ್ತೊಂದು ಹೊಸ ಆಯಾಮ ಸಿಕ್ಕಿದ್ದು, ಎಸ್ಐಟಿ ಈ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm