ಬ್ರೇಕಿಂಗ್ ನ್ಯೂಸ್
16-06-26 11:35 am HK News Staffer ಕರಾವಳಿ
ಮಂಗಳೂರು, ಜೂನ್ 15 : ಬಸ್ಗಾಗಿ ಕಾಯುತ್ತಿರುವ ಪ್ರಯಾಣಿಕರು ದೂರದಿಂದ ನೋಡಿದರೆ ನಿಜವಾಗಿಯೂ ಬಸ್ ನಿಂತಿದೆಯೇನೋ ಎಂದು ಭ್ರಮಿಸುವಂತಹ ವಿಶಿಷ್ಟ ಬಸ್ ತಂಗುದಾಣ ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣವಾಗಿದ್ದು, ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಗುರುಪುರದ ವಿ2 ಗೈಸ್ ಯುವಕ ಸಂಘದ ಸದಸ್ಯರು ತಮ್ಮ ಸಾಮಾಜಿಕ ಕಾಳಜಿ ಹಾಗೂ ಸೃಜನಶೀಲತೆಯನ್ನು ಒಗ್ಗೂಡಿಸಿ, ನಿಜವಾದ ಬಸ್ ಮಾದರಿಯಲ್ಲೇ ಬಸ್ ತಂಗುದಾಣವನ್ನು ವಿನೂತನವಾಗಿ ನಿರ್ಮಿಸಿದ್ದಾರೆ. ವಿಶೇಷ ವಿನ್ಯಾಸ, ಆಕರ್ಷಕ ಬಣ್ಣಗಳ ಬಳಕೆ ಮತ್ತು ಬಸ್ನ ಪ್ರತಿರೂಪದಂತೆ ರೂಪುಗೊಂಡಿರುವ ಈ ತಂಗುದಾಣ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
₹7 ಲಕ್ಷ ವೆಚ್ಚದಲ್ಲಿ ನಿರ್ಮಾಣ
ಬಸ್ ತಂಗುದಾಣವನ್ನು ಸುಮಾರು ₹7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದೆ ಇದ್ದ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಯುವಕರು ಸ್ವಯಂಪ್ರೇರಿತವಾಗಿ ಮುಂದಾಗಿ ಹೊಸ ತಂಗುದಾಣ ನಿರ್ಮಿಸುವ ಸಂಕಲ್ಪ ಕೈಗೊಂಡಿದ್ದರು. ಅದರ ಫಲವಾಗಿ ಇದೀಗ ಬಂಡಸಾಲೆಗೆ ವಿಶಿಷ್ಟ ಗುರುತನ್ನು ತಂದುಕೊಡುವ ಬಸ್ ಮಾದರಿಯ ತಂಗುದಾಣ ತಲೆ ಎತ್ತಿದೆ.



ಪ್ರಯಾಣಿಕರಿಗೆ ಆಶ್ರಯ, ಪ್ರವಾಸಿಗರಿಗೆ ಆಕರ್ಷಣೆ
ಕೇವಲ ಬಸ್ ಕಾಯುವ ಸ್ಥಳವಾಗಿ ಉಳಿಯದೆ, ಈ ಬಸ್ ತಂಗುದಾಣ ಈಗ ಸೆಲ್ಫಿ ಪ್ರಿಯರು ಹಾಗೂ ಪ್ರವಾಸಿಗರಿಗೂ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ದೂರದಿಂದ ನೋಡಿದರೆ ರಸ್ತೆಯ ಬದಿಯಲ್ಲಿ ನಿಜವಾದ ಬಸ್ ನಿಂತಿರುವಂತೆ ಕಾಣುವ ಈ ವಿನ್ಯಾಸ ಎಲ್ಲರಲ್ಲೂ ಕುತೂಹಲ ಮೂಡಿಸುತ್ತಿದೆ.
ಯುವಕರ ಸಾಮಾಜಿಕ ಕಾಳಜಿಗೆ ಶ್ಲಾಘನೆ
ಸಾರ್ವಜನಿಕರ ಅಗತ್ಯವನ್ನು ಮನಗಂಡು, ಸ್ವಂತ ಸಂಪನ್ಮೂಲಗಳನ್ನು ಬಳಸಿ ಗ್ರಾಮಕ್ಕೆ ಉಪಯುಕ್ತವಾಗುವ ಶಾಶ್ವತ ಸೌಲಭ್ಯ ನಿರ್ಮಿಸಿರುವ ವಿ2 ಗೈಸ್ ಯುವಕ ಸಂಘದ ಕಾರ್ಯಕ್ಕೆ ಸ್ಥಳೀಯರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಂಡಸಾಲೆಯ ಈ ವಿನೂತನ ಬಸ್ ತಂಗುದಾಣ ಈಗ ಗುರುಪುರ ಭಾಗದ ಹೊಸ ಲ್ಯಾಂಡ್ಮಾರ್ಕ್ ಆಗಿ ಗುರುತಿಸಿಕೊಂಡಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm