ಬ್ರೇಕಿಂಗ್ ನ್ಯೂಸ್
16-06-26 11:35 am HK News Staffer ಕರಾವಳಿ
ಮಂಗಳೂರು, ಜೂನ್ 15 : ಬಸ್ಗಾಗಿ ಕಾಯುತ್ತಿರುವ ಪ್ರಯಾಣಿಕರು ದೂರದಿಂದ ನೋಡಿದರೆ ನಿಜವಾಗಿಯೂ ಬಸ್ ನಿಂತಿದೆಯೇನೋ ಎಂದು ಭ್ರಮಿಸುವಂತಹ ವಿಶಿಷ್ಟ ಬಸ್ ತಂಗುದಾಣ ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣವಾಗಿದ್ದು, ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಗುರುಪುರದ ವಿ2 ಗೈಸ್ ಯುವಕ ಸಂಘದ ಸದಸ್ಯರು ತಮ್ಮ ಸಾಮಾಜಿಕ ಕಾಳಜಿ ಹಾಗೂ ಸೃಜನಶೀಲತೆಯನ್ನು ಒಗ್ಗೂಡಿಸಿ, ನಿಜವಾದ ಬಸ್ ಮಾದರಿಯಲ್ಲೇ ಬಸ್ ತಂಗುದಾಣವನ್ನು ವಿನೂತನವಾಗಿ ನಿರ್ಮಿಸಿದ್ದಾರೆ. ವಿಶೇಷ ವಿನ್ಯಾಸ, ಆಕರ್ಷಕ ಬಣ್ಣಗಳ ಬಳಕೆ ಮತ್ತು ಬಸ್ನ ಪ್ರತಿರೂಪದಂತೆ ರೂಪುಗೊಂಡಿರುವ ಈ ತಂಗುದಾಣ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
₹7 ಲಕ್ಷ ವೆಚ್ಚದಲ್ಲಿ ನಿರ್ಮಾಣ
ಬಸ್ ತಂಗುದಾಣವನ್ನು ಸುಮಾರು ₹7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದೆ ಇದ್ದ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಯುವಕರು ಸ್ವಯಂಪ್ರೇರಿತವಾಗಿ ಮುಂದಾಗಿ ಹೊಸ ತಂಗುದಾಣ ನಿರ್ಮಿಸುವ ಸಂಕಲ್ಪ ಕೈಗೊಂಡಿದ್ದರು. ಅದರ ಫಲವಾಗಿ ಇದೀಗ ಬಂಡಸಾಲೆಗೆ ವಿಶಿಷ್ಟ ಗುರುತನ್ನು ತಂದುಕೊಡುವ ಬಸ್ ಮಾದರಿಯ ತಂಗುದಾಣ ತಲೆ ಎತ್ತಿದೆ.



ಪ್ರಯಾಣಿಕರಿಗೆ ಆಶ್ರಯ, ಪ್ರವಾಸಿಗರಿಗೆ ಆಕರ್ಷಣೆ
ಕೇವಲ ಬಸ್ ಕಾಯುವ ಸ್ಥಳವಾಗಿ ಉಳಿಯದೆ, ಈ ಬಸ್ ತಂಗುದಾಣ ಈಗ ಸೆಲ್ಫಿ ಪ್ರಿಯರು ಹಾಗೂ ಪ್ರವಾಸಿಗರಿಗೂ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ದೂರದಿಂದ ನೋಡಿದರೆ ರಸ್ತೆಯ ಬದಿಯಲ್ಲಿ ನಿಜವಾದ ಬಸ್ ನಿಂತಿರುವಂತೆ ಕಾಣುವ ಈ ವಿನ್ಯಾಸ ಎಲ್ಲರಲ್ಲೂ ಕುತೂಹಲ ಮೂಡಿಸುತ್ತಿದೆ.
ಯುವಕರ ಸಾಮಾಜಿಕ ಕಾಳಜಿಗೆ ಶ್ಲಾಘನೆ
ಸಾರ್ವಜನಿಕರ ಅಗತ್ಯವನ್ನು ಮನಗಂಡು, ಸ್ವಂತ ಸಂಪನ್ಮೂಲಗಳನ್ನು ಬಳಸಿ ಗ್ರಾಮಕ್ಕೆ ಉಪಯುಕ್ತವಾಗುವ ಶಾಶ್ವತ ಸೌಲಭ್ಯ ನಿರ್ಮಿಸಿರುವ ವಿ2 ಗೈಸ್ ಯುವಕ ಸಂಘದ ಕಾರ್ಯಕ್ಕೆ ಸ್ಥಳೀಯರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಂಡಸಾಲೆಯ ಈ ವಿನೂತನ ಬಸ್ ತಂಗುದಾಣ ಈಗ ಗುರುಪುರ ಭಾಗದ ಹೊಸ ಲ್ಯಾಂಡ್ಮಾರ್ಕ್ ಆಗಿ ಗುರುತಿಸಿಕೊಂಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm