ಬ್ರೇಕಿಂಗ್ ನ್ಯೂಸ್
18-06-26 12:33 pm HK News Staffer ಕರಾವಳಿ
ಮಂಗಳೂರು, ಜೂನ್ 18: ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ, ಜ್ವರ, ಭೇದಿ, ಸಹಿಸಲು ಆಗದ ಸುಸ್ತು ಸೇರಿದಂತೆ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ. ಪಂಪ್ವೆಲ್ ಬಯೋಟೆಕ್ ಲ್ಯಾಬೋರೇಟರಿ ಹಾಗೂ ಬಿಜೈ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಿದ ಪರೀಕ್ಷೆಯ ನಂತರ ಈ ನೀರು ಕುಡಿಯಲು ಯೋಗ್ಯ ಅಲ್ಲವೇ ಅಲ್ಲ ಎಂಬ ವರದಿ ಬಂದಿರುವುದು ಮತ್ತಷ್ಟು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ಸಿಗದಂತೆ ಅಧಿಕಾರಿಗಳು ಪ್ರಯತ್ನಿಸಿದ್ದು ಯಾಕೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ರಾಜ್ಯದ ಆರೋಗ್ಯ ಸಚಿವರು ನಮ್ಮದೇ ಜಿಲ್ಲೆಯವರಾಗಿದ್ದರೂ ಕೂಡಾ ನಮ್ಮ ಜನರಿಗೆ ಆರೋಗ್ಯದ ಬಗ್ಗೆ ಗ್ಯಾರಂಟಿ ಒದಗಿಸಲು ಸಾಧ್ಯವಾಗಿಲ್ಲದಿರುವುದು ದುರಂತ. ಸದ್ಯ ಪಾಲಿಕೆಯಲ್ಲಿ ಯಾವುದೇ ಜನಪ್ರತಿನಿಧಿಗಳು ಇಲ್ಲದೇ ಆಡಳಿತಾಧಿಕಾರಿ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿದೆ. ಹಾಗಿರುವಾಗ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದೆ. ಸರ್ಕಾರದ, ಪಾಲಿಕೆಯ ಬೇಜವಾಬ್ದಾರಿಗೆ ಜನರು ತೊಂದರೆ ಅನುಭವಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಕೂಡಲೇ ಇದರ ಹಿಂದಿನ ಕಾರಣ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರು ಈಗಾಗಲೇ ತಮ್ಮ ಮನೆಯ, ಅಪಾರ್ಟ್ಮೆಂಟ್ ಗಳ ಟಾಂಕಿಯಲ್ಲಿನ ಕಲುಷಿತ ನೀರನ್ನು ಚೆಲ್ಲಿದ್ದು, ಕೂಡಲೇ ಅವರಿಗೆ ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಶಾಸಕರು ಆಗ್ರಹಿಸಿದರು.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm