ಬ್ರೇಕಿಂಗ್ ನ್ಯೂಸ್
19-06-26 12:24 pm HK News Staffer ಕರಾವಳಿ
ಮಂಗಳೂರು, ಜೂನ್ 19: ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರ ಪೂರ್ವಾಪರ ತಿಳಿದುಕೊಳ್ಳದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿರುವ ಆರೋಪದಲ್ಲಿ ಬಜ್ಪೆ ಠಾಣೆಯ ಇಬ್ಬರು ಪೊಲೀಸ್ ಸಿಬಂದಿಯನ್ನು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದಾರೆ.
ಮಂಗಳೂರಿನ ಬಜಪೆ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಅಮಾನತು ಆದವರು. ಇವರು ಕಳೆದೊಂದು ವರ್ಷದಲ್ಲಿ 31 ಮಂದಿಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್) ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಉನ್ನತ ಮಟ್ಟದ ತನಿಖಾ ಏಜನ್ಸಿಯಿಂದ ಈ ರೀತಿಯ ದುರುಪಯೋಗ ಆಗಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರು ಸಿಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ, ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದಾರೆಂಬ ವಿಚಾರಗಳಿದ್ದು ಇಲಾಖೆಯ ಘೋರ ವೈಫಲ್ಯದ ಬಗ್ಗೆ ಚರ್ಚೆಗೀಡಾಗಿದೆ. ಇದರ ಬಗ್ಗೆ ಪೊಲೀಸ್ ಕಮಿಷನರ್ ತನಿಖೆಯ ಹೊಣೆಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ. ತನಿಖೆಯ ಬಳಿಕ ಖಚಿತ ಮಾಹಿತಿಯನ್ನು ನೀಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಬಂದು ತಾತ್ಕಾಲಿಕ ವಿಳಾಸ ಹೊಂದಿದ್ದವರು, ಪಾಸ್ ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಠಾಣೆಯಿಂದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಆದರೆ ಈ ರೀತಿ ಸರ್ಟಿಫಿಕೇಟ್ ಪಡೆದಿರುವ 31 ಮಂದಿಯಲ್ಲಿ ಕ್ರಿಮಿನಲ್ ಹಾಗು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾವರಿದ್ದಾರೆಂಬ ಮಾಹಿತಿಗಳಿದ್ದು ಕೇಂದ್ರ ತನಿಖಾ ಏಜನ್ಸಿಯೊಂದು ಇಲಾಖೆಯ ಲೋಪದ ಬಗ್ಗೆ ಮಂಗಳೂರು ಪೊಲೀಸರನ್ನು ಪ್ರಶ್ನೆ ಮಾಡಿತ್ತು.
ಇಲಾಖಾ ತನಿಖೆ ಸಂದರ್ಭದಲ್ಲಿ ಬಜ್ಪೆ ಠಾಣಾಧಿಕಾರಿಗೆ ತಿಳಿಸದೆ, ಅವರ ಪಾಸ್ವರ್ಡ್ ದುರುಪಯೋಗ ಪಡಿಸಿ ಸಿಬ್ಬಂದಿಗಳೇ ಕ್ಲಿಯರೆನ್ಸ್ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿ ಭರತ್ ಎಕ್ಕಾರ್ ಹಾಗು ಮಮತಾ ಎಂಬವರಿಂದ ಹಣ ಪಡೆದಿದ್ದಾರೆಂಬ ಮಾಹಿತಿಯಿದೆ. ಪ್ರಕರಣಕ್ಕೆ ಸಂಬಂಧಿಸಿ ಭರತ್ ಹಾಗು ಮಮತಾ ಅವರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ BNS ಕಲಂ 336(2),(3), 340(2), 316(5),318(4) ಅಡಿ ಪ್ರಕರಣ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm