ಬ್ರೇಕಿಂಗ್ ನ್ಯೂಸ್
19-06-26 12:24 pm HK News Staffer ಕರಾವಳಿ
ಮಂಗಳೂರು, ಜೂನ್ 19: ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರ ಪೂರ್ವಾಪರ ತಿಳಿದುಕೊಳ್ಳದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿರುವ ಆರೋಪದಲ್ಲಿ ಬಜ್ಪೆ ಠಾಣೆಯ ಇಬ್ಬರು ಪೊಲೀಸ್ ಸಿಬಂದಿಯನ್ನು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದಾರೆ.
ಮಂಗಳೂರಿನ ಬಜಪೆ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಅಮಾನತು ಆದವರು. ಇವರು ಕಳೆದೊಂದು ವರ್ಷದಲ್ಲಿ 31 ಮಂದಿಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್) ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಉನ್ನತ ಮಟ್ಟದ ತನಿಖಾ ಏಜನ್ಸಿಯಿಂದ ಈ ರೀತಿಯ ದುರುಪಯೋಗ ಆಗಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರು ಸಿಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ, ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದಾರೆಂಬ ವಿಚಾರಗಳಿದ್ದು ಇಲಾಖೆಯ ಘೋರ ವೈಫಲ್ಯದ ಬಗ್ಗೆ ಚರ್ಚೆಗೀಡಾಗಿದೆ. ಇದರ ಬಗ್ಗೆ ಪೊಲೀಸ್ ಕಮಿಷನರ್ ತನಿಖೆಯ ಹೊಣೆಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ. ತನಿಖೆಯ ಬಳಿಕ ಖಚಿತ ಮಾಹಿತಿಯನ್ನು ನೀಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಬಂದು ತಾತ್ಕಾಲಿಕ ವಿಳಾಸ ಹೊಂದಿದ್ದವರು, ಪಾಸ್ ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಠಾಣೆಯಿಂದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಆದರೆ ಈ ರೀತಿ ಸರ್ಟಿಫಿಕೇಟ್ ಪಡೆದಿರುವ 31 ಮಂದಿಯಲ್ಲಿ ಕ್ರಿಮಿನಲ್ ಹಾಗು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾವರಿದ್ದಾರೆಂಬ ಮಾಹಿತಿಗಳಿದ್ದು ಕೇಂದ್ರ ತನಿಖಾ ಏಜನ್ಸಿಯೊಂದು ಇಲಾಖೆಯ ಲೋಪದ ಬಗ್ಗೆ ಮಂಗಳೂರು ಪೊಲೀಸರನ್ನು ಪ್ರಶ್ನೆ ಮಾಡಿತ್ತು.
ಇಲಾಖಾ ತನಿಖೆ ಸಂದರ್ಭದಲ್ಲಿ ಬಜ್ಪೆ ಠಾಣಾಧಿಕಾರಿಗೆ ತಿಳಿಸದೆ, ಅವರ ಪಾಸ್ವರ್ಡ್ ದುರುಪಯೋಗ ಪಡಿಸಿ ಸಿಬ್ಬಂದಿಗಳೇ ಕ್ಲಿಯರೆನ್ಸ್ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿ ಭರತ್ ಎಕ್ಕಾರ್ ಹಾಗು ಮಮತಾ ಎಂಬವರಿಂದ ಹಣ ಪಡೆದಿದ್ದಾರೆಂಬ ಮಾಹಿತಿಯಿದೆ. ಪ್ರಕರಣಕ್ಕೆ ಸಂಬಂಧಿಸಿ ಭರತ್ ಹಾಗು ಮಮತಾ ಅವರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ BNS ಕಲಂ 336(2),(3), 340(2), 316(5),318(4) ಅಡಿ ಪ್ರಕರಣ ದಾಖಲಾಗಿದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm