ಬ್ರೇಕಿಂಗ್ ನ್ಯೂಸ್
19-06-26 12:24 pm HK News Staffer ಕರಾವಳಿ
ಮಂಗಳೂರು, ಜೂನ್ 19: ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರ ಪೂರ್ವಾಪರ ತಿಳಿದುಕೊಳ್ಳದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿರುವ ಆರೋಪದಲ್ಲಿ ಬಜ್ಪೆ ಠಾಣೆಯ ಇಬ್ಬರು ಪೊಲೀಸ್ ಸಿಬಂದಿಯನ್ನು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದಾರೆ.
ಮಂಗಳೂರಿನ ಬಜಪೆ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಅಮಾನತು ಆದವರು. ಇವರು ಕಳೆದೊಂದು ವರ್ಷದಲ್ಲಿ 31 ಮಂದಿಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್) ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಉನ್ನತ ಮಟ್ಟದ ತನಿಖಾ ಏಜನ್ಸಿಯಿಂದ ಈ ರೀತಿಯ ದುರುಪಯೋಗ ಆಗಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರು ಸಿಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ, ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದಾರೆಂಬ ವಿಚಾರಗಳಿದ್ದು ಇಲಾಖೆಯ ಘೋರ ವೈಫಲ್ಯದ ಬಗ್ಗೆ ಚರ್ಚೆಗೀಡಾಗಿದೆ. ಇದರ ಬಗ್ಗೆ ಪೊಲೀಸ್ ಕಮಿಷನರ್ ತನಿಖೆಯ ಹೊಣೆಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ. ತನಿಖೆಯ ಬಳಿಕ ಖಚಿತ ಮಾಹಿತಿಯನ್ನು ನೀಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಬಂದು ತಾತ್ಕಾಲಿಕ ವಿಳಾಸ ಹೊಂದಿದ್ದವರು, ಪಾಸ್ ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಠಾಣೆಯಿಂದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಆದರೆ ಈ ರೀತಿ ಸರ್ಟಿಫಿಕೇಟ್ ಪಡೆದಿರುವ 31 ಮಂದಿಯಲ್ಲಿ ಕ್ರಿಮಿನಲ್ ಹಾಗು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾವರಿದ್ದಾರೆಂಬ ಮಾಹಿತಿಗಳಿದ್ದು ಕೇಂದ್ರ ತನಿಖಾ ಏಜನ್ಸಿಯೊಂದು ಇಲಾಖೆಯ ಲೋಪದ ಬಗ್ಗೆ ಮಂಗಳೂರು ಪೊಲೀಸರನ್ನು ಪ್ರಶ್ನೆ ಮಾಡಿತ್ತು.
ಇಲಾಖಾ ತನಿಖೆ ಸಂದರ್ಭದಲ್ಲಿ ಬಜ್ಪೆ ಠಾಣಾಧಿಕಾರಿಗೆ ತಿಳಿಸದೆ, ಅವರ ಪಾಸ್ವರ್ಡ್ ದುರುಪಯೋಗ ಪಡಿಸಿ ಸಿಬ್ಬಂದಿಗಳೇ ಕ್ಲಿಯರೆನ್ಸ್ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿ ಭರತ್ ಎಕ್ಕಾರ್ ಹಾಗು ಮಮತಾ ಎಂಬವರಿಂದ ಹಣ ಪಡೆದಿದ್ದಾರೆಂಬ ಮಾಹಿತಿಯಿದೆ. ಪ್ರಕರಣಕ್ಕೆ ಸಂಬಂಧಿಸಿ ಭರತ್ ಹಾಗು ಮಮತಾ ಅವರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ BNS ಕಲಂ 336(2),(3), 340(2), 316(5),318(4) ಅಡಿ ಪ್ರಕರಣ ದಾಖಲಾಗಿದೆ.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm