ಬ್ರೇಕಿಂಗ್ ನ್ಯೂಸ್
06-01-21 10:34 pm Mangaluru Correspondent ಕರಾವಳಿ
ಕೊಣಾಜೆ, ಜ .6: ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಗಣಿಗಾರಿಕೆ ಹಾಗೂ ಅಕ್ರಮ ಮಣ್ಣು ಸಾಗಾಟ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲ ಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಉತ್ತರ ಕನ್ನಡ, ಬೀದರ್ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಎಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil visited mining centres in Mudipu, Konaje in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm