ಬ್ರೇಕಿಂಗ್ ನ್ಯೂಸ್
06-01-21 10:34 pm Mangaluru Correspondent ಕರಾವಳಿ
ಕೊಣಾಜೆ, ಜ .6: ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಗಣಿಗಾರಿಕೆ ಹಾಗೂ ಅಕ್ರಮ ಮಣ್ಣು ಸಾಗಾಟ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲ ಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಉತ್ತರ ಕನ್ನಡ, ಬೀದರ್ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಎಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil visited mining centres in Mudipu, Konaje in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm