ಬ್ರೇಕಿಂಗ್ ನ್ಯೂಸ್
23-06-26 11:49 am HK News Staffer ಕರಾವಳಿ
ಮಂಗಳೂರು, ಜೂನ್ 23: ಮುಸ್ಲಿಮರಿಗೆ ಸಚಿವ ಸ್ಥಾನ ನೀಡುವಂತೆ ಮಂಗಳೂರಿನಲ್ಲಿ ಸಮಾನ ಮನಸ್ಕರ ಹೆಸರಲ್ಲಿ ಮುಸ್ಲಿಂ ನಾಯಕರು ಸುದ್ದಿಗೋಷ್ಟಿ ನಡೆಸಿರುವುದಕ್ಕೆ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡೋದು ಬೇಡ. ಬೇರೆ ಬೇರೆ ಹೆಸರು ಇಟ್ಟುಕೊಂಡು, ಸಮಾನ ಮನಸ್ಕರು ಅಂತ ಹೇಳಿಕೊಂಡು ಕಾಂಗ್ರೆಸಿಗೆ ಬುದ್ಧಿವಾದ ಹೇಳೋದು ಬೇಡ ಎಂದು ತಿರುಗೇಟು ನೀಡಿದ್ದಾರೆ.
ಪಕ್ಷಕ್ಕೆ ಓಟ್ ಹಾಕಿದವರು, ಪಕ್ಷಕ್ಕೆ ದುಡಿದವರು ಮಾತ್ರ ಪಕ್ಷದ ಬಗ್ಗೆ ಮಾತನಾಡಲಿ, ಸಮಾನ ಮನಸ್ಕರು ಅಂತ ಹೇಳಿಕೊಂಡು ಬರೋದು ಬೇಡ. ಕಾಂಗ್ರೆಸ್ ಗೆ ಇವರು ಬುದ್ದಿವಾದ ಹೇಳೋ ಅವಶ್ಯಕತೆ ಇಲ್ಲ, ಇವರ ಬುದ್ದಿವಾದ ಪಕ್ಷ ತೆಗೋಳಲ್ಲ. ಪಕ್ಷವನ್ನು ವಿರೋಧ ಮಾಡಿದವರು ಇವತ್ತು ಪಕ್ಷಕ್ಕೆ ನಿರ್ದೇಶನ ಕೊಡುವ ಅಗತ್ಯ ಇಲ್ಲ.
ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಮಾತ್ರ ಅಲ್ಲ, ಎಲ್ಲವೂ ಕೊಟ್ಟಿದೆ. ಜಮೀರ್ ಅಹ್ಮದ್, ನಾವು ಹಾಗೂ ಎಲ್ಲಾ ಮುಸ್ಲಿಮರು ಒಟ್ಟಿಗೆ ಇದ್ದಾರೆ. ಪಕ್ಷದ ಅಧ್ಯಕ್ಷರು, ಸಿಎಂ ಎಲ್ಲಾ ಸೇರಿ ಅಲ್ಪಸಂಖ್ಯಾತರಿಗೆ ಅವಕಾಶ ಕೊಡ್ತಾರೆ. ರಾಜಕೀಯವಾಗಿ ಇನ್ನಷ್ಟು ಇದನ್ನು ಬಿಗಡಾಯಿಸುವ ಅಗತ್ಯ ಇಲ್ಲ. ಕಾಂಗ್ರೆಸ್ ಗೆ ಮತ ಹಾಕದವರನ್ನ ನಾವು ಗಣನೆಗೆ ತೆಗೆಯಲ್ಲ ಎಂದು ಸಚಿವ ಯು.ಟಿ ಖಾದರ್ ಮಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಡದಿ ಟೌನ್ ಶಿಪ್ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವರು ಮಾರ್ಗದ ಮಧ್ಯೆ ಚರ್ಚೆ ಮಾಡಲು ಆಗ್ತದಾ..? ವಿಧಾನಸೌಧ ಇರೋದು ರಾಜ್ಯದ ಜನರ ಬಗ್ಗೆ ಚರ್ಚೆ ಮಾಡಲು. ಟೌನ್ ಶಿಪ್ ಬಗ್ಗೆ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವರು ಮಾರ್ಗದ ಮಧ್ಯೆ ಚರ್ಚೆ ಮಾಡಲು ಆಗಲ್ಲ. ವಿಧಾನಸೌಧ ಅದಕ್ಕೆ ಸೂಕ್ತ ಜಾಗ, ಅದು ಜನರಿಗೆ ಎಲ್ಲರಿಗೂ ಅರ್ಥವಾಗುತ್ತದೆ. ಈ ಬಿಡದಿ ಟೌನ್ ಶಿಪ್ ನೋಟಿಫಿಕೇಶನ್ ಮಾಡಿದ್ದು ಯಾರು ಅಂತ ಜನರಿಗೆ ಮೊದಲು ತಿಳಿಸಲಿ.
ನೋಟಿಫಿಕೇಶನ್ ಮಾಡಿದ್ದು ಯಾರು ಅನ್ನೋ ಸತ್ಯ ವಿಚಾರ ಜೆಡಿಎಸ್ ಮುಖಂಡರು ಹೇಳಲಿ. ಅದು ಮಾಡಿದ್ದೇ ಇವರು, ಆ ಸತ್ಯ ಗೊತ್ತಾಗಲಿ. ಕಾಂಗ್ರೆಸ್ ಪಕ್ಷ ರೈತರ ಪರವಾಗಿ ಇದ್ದದ್ದು, ಈ ದೇಶದ ರೈತರು ವಿಶ್ವಕ್ಕೆ ಮಾದರಿ. ಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಪರ ಆಲೋಚನೆ ಮಾಡುತ್ತದೆ. ರೈತರಿಗೆ ತೊಂದರೆ ಆಗೋ ಯಾವುದೇ ಯೋಜನೆ ಮಾಡಲ್ಲ ಅಂತ ಸಿಎಂ ಹೇಳಿದ್ದಾರೆ. ರೈತರಿಗೆ, ಅವರ ಕುಟುಂಬಕ್ಕೆ ಈ ಯೋಜನೆ ಸಹಾಯವಾಗಲಿದೆ. ಕೆಲವರು ರಾಜಕೀಯ ಮಾತನಾಡ್ತಾರೆ, ರಾಜಕೀಯ ಬಿಟ್ಟು ಹೊರಗೆ ಬನ್ನಿ ಎಂದು ಸಚಿವ ಯು.ಟಿ ಖಾದರ್, ಎಚ್ಡಿಕೆ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm