ಬ್ರೇಕಿಂಗ್ ನ್ಯೂಸ್
23-06-26 03:18 pm HK News Staffer ಕರಾವಳಿ
ಉಳ್ಳಾಲ, ಜೂ.23: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮುಡಿಪು -ಸ್ಟೇಟ್ ಬ್ಯಾಂಕಿನ ನಡುವೆ ಸಂಚರಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಸರ್ವಿಸ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಏರಿದೆ. ಬಸ್ಸು ಮುಡಿಪುವಿನಿಂದ ದೇರಳಕಟ್ಟೆ ತಲುಪಿದಾಗ ಚಾಲಕ ಜನಾರ್ಧನ್ ಅವರಿಗೆ ಬಿಪಿ ಲೋ ಆದ ಪರಿಣಾಮ ಅವರು ಸ್ಟೇರಿಂಗ್ ಮೇಲೆಯೇ ಕುಸಿದಿದ್ದರೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಮಧ್ಯದ ಡಿವೈಡರ್ ಏರಿ ನಿಂತಿದೆ.



ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಯೆನೆಪೋಯ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ವಾಹನ ಚಾಲಕರು ದಿನನಿತ್ಯಲೂ ವಿರುದ್ಧ ಧಿಕ್ಕಿನಲ್ಲಿ ಚಲಿಸಿ ಯೂ-ಟರ್ನ್ ಹೊಡೆಯುತ್ತಿರುತ್ತಾರೆ. ಆದರೆ ಇಂದು ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿಗೆ ಯಾವುದೇ ವಾಹನಗಳು ಅಡ್ಡ ಸಿಗದ ಕಾರಣ ಅನಾಹುತ ತಪ್ಪಿದಂತಾಗಿದೆ.
ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ಧನ ಅವರನ್ನು ಅಲ್ಲೇ ಇದ್ದ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm