ಬ್ರೇಕಿಂಗ್ ನ್ಯೂಸ್
23-06-26 03:18 pm HK News Staffer ಕರಾವಳಿ
ಉಳ್ಳಾಲ, ಜೂ.23: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮುಡಿಪು -ಸ್ಟೇಟ್ ಬ್ಯಾಂಕಿನ ನಡುವೆ ಸಂಚರಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಸರ್ವಿಸ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಏರಿದೆ. ಬಸ್ಸು ಮುಡಿಪುವಿನಿಂದ ದೇರಳಕಟ್ಟೆ ತಲುಪಿದಾಗ ಚಾಲಕ ಜನಾರ್ಧನ್ ಅವರಿಗೆ ಬಿಪಿ ಲೋ ಆದ ಪರಿಣಾಮ ಅವರು ಸ್ಟೇರಿಂಗ್ ಮೇಲೆಯೇ ಕುಸಿದಿದ್ದರೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಮಧ್ಯದ ಡಿವೈಡರ್ ಏರಿ ನಿಂತಿದೆ.



ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಯೆನೆಪೋಯ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ವಾಹನ ಚಾಲಕರು ದಿನನಿತ್ಯಲೂ ವಿರುದ್ಧ ಧಿಕ್ಕಿನಲ್ಲಿ ಚಲಿಸಿ ಯೂ-ಟರ್ನ್ ಹೊಡೆಯುತ್ತಿರುತ್ತಾರೆ. ಆದರೆ ಇಂದು ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿಗೆ ಯಾವುದೇ ವಾಹನಗಳು ಅಡ್ಡ ಸಿಗದ ಕಾರಣ ಅನಾಹುತ ತಪ್ಪಿದಂತಾಗಿದೆ.
ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ಧನ ಅವರನ್ನು ಅಲ್ಲೇ ಇದ್ದ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm