ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm