ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm