ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm