ಬ್ರೇಕಿಂಗ್ ನ್ಯೂಸ್
30-06-26 11:39 am HK News Staffer ಕರಾವಳಿ
ಮಂಗಳೂರು, ಜೂನ್ 30: ಸುರತ್ಕಲ್ ಕಡಲ ತೀರದಿಂದ 33 ನಾಟಿಕಲ್ಸ್ ಮೈಲು ದೂರದ ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಉಡುಪಿ ಮೂಲದ 6 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿ ಮಂಗಳೂರು ಬಂದರಿಗೆ ಕರೆತಂದಿದೆ.
ಜೂನ್ 29ರ ಸಂಜೆ ನಾಲ್ಕು ಗಂಟೆಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಅಪಾಯಕ್ಕೆ ಸಿಲುಕಿರುವ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ್ದ ಐಸಿಜಿಎಸ್ ಸಚೇತ್ ಹಡಗಿನ ಮೂಲಕ ಕೋಸ್ಟ್ ಗಾರ್ಡ್ ಪಡೆ ಕಾರ್ಯ ನಡೆಸಿದೆ. ಮೀನುಗಾರರನ್ನು ರಕ್ಷಿಸಿದ ಯೋಧರು ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆತಂದಿದ್ದಾರೆ.


ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಪಾಯಕ್ಕೆ ಈಡಾಗಿತ್ತು. ಅದರಲ್ಲಿದ್ದವರು ತಮ್ಮನ್ನು ಬಚಾವ್ ಮಾಡುವಂತೆ ಸಂದೇಶ ಕಳಿಸಿದ್ದರು. ಬೋಟ್ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ನೀರು ನುಗ್ಗತೊಡಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ಕಾರ್ಯಾಚರಣೆಗೆ ಮುಂದಾಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟನ್ನು ಪತ್ತೆ ಹಚ್ಚಿ 90 ನಿಮಿಷಗಳ ಕಾಲ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ರಿಮೋಟ್ ಆಪರೇಟೆಡ್ ಲೈಫ್ ಬಾಯ್ಸ್ ಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಿ, ಮೀನುಗಾರರನ್ನು ರಕ್ಷಿಸಲಾಗಿದೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm