ಬ್ರೇಕಿಂಗ್ ನ್ಯೂಸ್
30-06-26 11:39 am HK News Staffer ಕರಾವಳಿ
ಮಂಗಳೂರು, ಜೂನ್ 30: ಸುರತ್ಕಲ್ ಕಡಲ ತೀರದಿಂದ 33 ನಾಟಿಕಲ್ಸ್ ಮೈಲು ದೂರದ ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಉಡುಪಿ ಮೂಲದ 6 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿ ಮಂಗಳೂರು ಬಂದರಿಗೆ ಕರೆತಂದಿದೆ.
ಜೂನ್ 29ರ ಸಂಜೆ ನಾಲ್ಕು ಗಂಟೆಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಅಪಾಯಕ್ಕೆ ಸಿಲುಕಿರುವ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ್ದ ಐಸಿಜಿಎಸ್ ಸಚೇತ್ ಹಡಗಿನ ಮೂಲಕ ಕೋಸ್ಟ್ ಗಾರ್ಡ್ ಪಡೆ ಕಾರ್ಯ ನಡೆಸಿದೆ. ಮೀನುಗಾರರನ್ನು ರಕ್ಷಿಸಿದ ಯೋಧರು ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆತಂದಿದ್ದಾರೆ.


ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಪಾಯಕ್ಕೆ ಈಡಾಗಿತ್ತು. ಅದರಲ್ಲಿದ್ದವರು ತಮ್ಮನ್ನು ಬಚಾವ್ ಮಾಡುವಂತೆ ಸಂದೇಶ ಕಳಿಸಿದ್ದರು. ಬೋಟ್ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ನೀರು ನುಗ್ಗತೊಡಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ಕಾರ್ಯಾಚರಣೆಗೆ ಮುಂದಾಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟನ್ನು ಪತ್ತೆ ಹಚ್ಚಿ 90 ನಿಮಿಷಗಳ ಕಾಲ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ರಿಮೋಟ್ ಆಪರೇಟೆಡ್ ಲೈಫ್ ಬಾಯ್ಸ್ ಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಿ, ಮೀನುಗಾರರನ್ನು ರಕ್ಷಿಸಲಾಗಿದೆ.
04-08-26 09:12 pm
HK News Staffer
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
ಶಾಸಕರು ರಾಜೀನಾಮೆ ಕೊಟ್ರೆ ಎರಡೇ ನಿಮಿಷದಲ್ಲಿ ಅಂಗೀಕಾ...
04-08-26 03:15 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am